ಮಂಜೇಶ್ವರ: ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸಮಿತಿ ಗಿಳಿವಿಂಡು ಆಶ್ರಯದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಮಂಜೇಶ್ವರ ಗಿಳಿವಿಂಡಲ್ಲಿ ಭಾನುವಾರ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಅವರ 142ನೇ ಜನ್ಮದಿನಾಚರಣೆ ಸಮಾರಂಭ ಜರಗಿತು
ಹಿರಿಯ ಸಾಹಿತಿ, ಯಕ್ಷಗಾನ ಅರ್ಥಧಾರಿ, ವೈದ್ಯ ಡಾ.ರಮಾನಂದ ಬನಾರಿ ದೀಪ ಬೆಳಗಿಸಿ ಉದ್ಘಾಟಿಸಿದರು
ಸಮಾರಂಭದಲ್ಲಿ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸಮಿತಿ ಕೊಡಮಾಡುವ ರಾಷ್ಟ್ರಕವಿ ಮಂಜೇಶ್ವರ ಸ್ಮಾರಕ ಪ್ರಶಸ್ತಿಯನ್ನು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕøತ ಅನುವಾದಕ, ಸಾಹಿತಿ ಕೆ.ವಿ.ಕುಮಾರನ್ ಮಾಸ್ತರ್ ಅವರಿಗೆ ಪ್ರದಾನಗೈದರು.
ಸ್ಮಾರಕ ಸಮಿತಿ ಹೊಸತಾಗಿ ಪ್ರಕಟಿಸಿದ ಗೋವಿಂದ ಪೈಗಳ ಸಮಗ್ರ ಬದುಕು-ಸಾಧನೆಗಳ ಕುರಿತಾದ ‘ಸುರಭಿ’ ಕೃತಿಯನ್ನು ಉದುಮ ಶಾಸಕ ವಕೀಲ ಸಿ.ಎಚ್.ಕುಂಞಂಬು ಬಿಡುಗಡೆಗೊಳಿಸಿದರು.
ಮಂಜೇಶ್ವರ ಗ್ರಾ.ಪಂ.ಅಧ್ಯಕ್ಷೆ ಜೀನ್ ಲವಿನೋ ಮೊಂತೆರೋ ಅಧ್ಯಕ್ಷತೆ ವಹಿಸಿದ್ದ ಸಮಾರಂಭದಲ್ಲಿ ಕೇರಳ ತುಳು ಅಕಾಡೆಮಿ ಅಧ್ಯಕ್ಷ ಕೆ.ಆರ್.ಜಯಾನಂದ, ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ಸಂಕಬೈಲು ಸತೀಶ ಅಡಪ, ಕ.ಸಾ.ಪ.ಕೇರಳ ಗಡಿನಾಡ ಘಟಕಾಧ್ಯಕ್ಷ ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಮಾತನಾಡಿದರು. ಪ್ರಶಸ್ತಿ ಪುರಸ್ಕೃತ ಕೆ.ವಿ.ಕುಮಾರನ್ ಮಾಸ್ತರ್ ಕೃತಜ್ಞತೆ ಸಲ್ಲಿಸಿ ಮಾತನಾಡಿದರು. ಗಿಳಿವಿಂಡು ಪ್ರಧಾನ ಕಾರ್ಯದರ್ಶಿ ಎಂ.ಉಮೇಶ ಸಾಲಿಯಾನ್ ಕಾಸರಗೋಡು ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಕೋಶಾಧಿಕಾರಿ ಬಾಲಕೃಷ್ಣ ಮಾಸ್ತರ್ ವಂದಿಸಿದರು. ವನಿತಾ ಆರ್.ಶೆಟ್ಟಿ ಹಾಗೂ ಆಶಾ ದಿಲೀಪ್ ಸುಳ್ಯಮೆ ಕಾರ್ಯಕ್ರಮ ನಿರೂಪಿಸಿದರು.
ಸಭಾ ಕಾರ್ಯಕ್ರಮದ ಮೊದಲು ವರ್ಷಾ ಮತ್ತು ಬಳಗ ಮತ್ತು ನಿಶ್ಮಿತ್ ಬಳಗದವರಿಂದ ಗೋವಿಂದ ಪೈ ಕೃತಿಗಳ ಗಾಯನ, ಹಾಗೂ ಸಭಾ ಕಾರ್ಯಕ್ರಮದ ಬಳಿಕ ವಿವಿಧ ತಂಡಗಳಿಂದ ನೃತ್ಯ ಕಾರ್ಯಕ್ರಮ, ಕವಿಗೋಷ್ಠಿ ನಡೆಯಿತು.ಸುರಭಿ ಕೃತಿಯ ಬಗ್ಗೆ ಸಂಪಾದಕಿ ಆಶಾ ದಿಲೀಪ್ ಸುಳ್ಯಮೆ ಮಾತನಾಡಿದರು. ಕೃತಿಗೆ ಬರಹಗಳನ್ನು ನೀಡಿದ ಜಯಂತಿ.ಕೆ, ಡಾ.ಯು.ಮಹೇಶ್ವರಿ, ಡಾ,ಸುಜೇಶ್ ಎಸ್., ಶಿವಶಂಕರ ಪಿ., ಶ್ರೀಲತ ಕೆ., ವನಿತಾ ಆರ್.ಶೆಟ್ಟಿ, ಉಮೇಶ್ ಎಂ.ಸಾಲ್ಯಾನ್ ಮೊದಲಾದವರನ್ನು ಗೌರವಿಸಲಾಯಿತು.
0 Comments