ಕಾಸರಗೋಡು : ಕೂಡ್ಲು ಕಾಳ್ಯಂಗಾಡು ಶ್ರೀ ಮೂಕಾಂಬಿಕಾ ಕ್ಷೇತ್ರದ ಜೀರ್ಣೋದ್ಧಾರ ಕಾರ್ಯದ ಅಂಗವಾಗಿ ಬಾಲಾಲಯ ಪ್ರತಿಷ್ಠೆ ಕ್ಷೇತ್ರದ ತಂತ್ರಿವರ್ಯರಾದ ಕುಕ್ಕಾಜೆ ಶ್ರೀ ಕೃಷ್ಣ ಗುರೂಜಿಯವರಿಗೆ ಪೂರ್ಣ ಕುಂಭ ಸ್ವಾಗತ ನೀಡಲಾಯಿತು.
ಈ ಸಂದರ್ಭದಲ್ಲಿ ಕ್ಷೇತ್ರದ ಮೊಕ್ತೇಸರ ಅಚ್ಚುತ ಕಾಳ್ಯಂಗಾಡ್, ಧರ್ಮದರ್ಶಿ ನಾರಾಯಣ ಪೂಜಾರಿ,ಜೀರ್ಣೋದ್ಧಾರ ಸಮಿತಿ ಗೌರವ ಸಲಹೆಗಾರ ರಘ ಮೀಪುಗುರಿ, ಗೌರವಾಧ್ಯಕ್ಷ ಡಾ.ಕೆ.ಎನ್.ವೆಂಕಟ್ರಮಣ ಹೊಳ್ಳ, ಅಧ್ಯಕ್ಷ ಮೋಹನ್ ರಾಜ್, ಪ್ರ.ಕಾರ್ಯದರ್ಶಿ ಹರೀಶ ಕೆ.ಆರ್, ಕೋಶಾಧಿಕಾರಿ ಶಾಂತ ಕುಮಾರ್ ಮುಂಡಿತ್ತಡ್ಕ ಸಹಿತ ನೂರಾರು ಭಕ್ತರು ಭಾಗವಹಿಸಿದ್ದರು. ಬಳಿಕ ಬಾಲಲಯ ಪ್ರತಿಷ್ಠಾ ಕಾರ್ಯಗಳಿಗೆ ಚಾಲನೆ ನೀಡಲಾಯಿತು.
0 Comments