ಬದಿಯಡ್ಕ: ಶ್ರೀ ಕ್ಷೇತ್ರ ಪೆರಡಾಲದಲ್ಲಿ ಜೀರ್ಣೋದ್ಧಾರ ಸಮಿತಿ ಮತ್ತು ಸೇವಾ ಸಮಿತಿಯ ಆಶ್ರಯದಲ್ಲಿ ಮೇ ಒಂದರಂದು ಲೋಕಕಲ್ಯಾಣರ್ಥವಾಗಿ ಬೆಳಗ್ಗೆ ಗಣಪತಿ ಹವನ, ಏಕಾದಶ ರುದ್ರಾಭಿಷೇಕ, ಸಾರ್ವಜನಿಕ ಸತ್ಯನಾರಾಯಣ ಪೂಜೆ, ಬಲಿವಾಡು ಕೂಟ ಸಾಮೂಹಿಕ ಪ್ರಾರ್ಥನೆ, ಬಳಿಕ ಧಾರ್ಮಿಕ ಸಭೆ, ಶಿವಶಕ್ತಿ ಆಯೋಜಿಸುವ ಶಿವಾರ್ಪಣಂ ನಿಧಿ ಕೂಪನ್ ಬಿಡುಗಡೆ ಸಮಾರಂಭ ನಡೆಯಲಿರುವುದು.ಸಂಜೆ ದುರ್ಗಾ ಪೂಜೆ, ರಾತ್ರಿ ಹನುಮಗಿರಿ ಮೇಳದವರಿಂದ ಯಕ್ಷಗಾನ ಬಯಲಾಟ ಧಾರ್ಮಿಕ ಸಭೆಯಲ್ಲಿ ಎಡನೀರು ಮಠಾಧೀಶರಾದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರು ಆಶೀರ್ವಚನ ನೀಡುವರು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶ್ರೀ ವಸಂತ ಪೈ ಬದಿಯಡ್ಕ ಅಧ್ಯಕ್ಷತೆ ವಹಿಸುವರು.. ಹುಡ್ಕೋ ಇದರ ಮಾಜಿ ಸಲಹೆಗಾರರು ಶ್ರೀ ರವೀಂದ್ರ ಆಳ್ವ ಕೋಟೆಕುಂಜ ಕಂಬಾರು ಸಭಾ ಕಾರ್ಯಕ್ರಮ ಉದ್ಘಾಟಿಸುವರು. ಮಲ್ಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀ ಸತ್ಯನಾರಾಯಣ ಭಟ್ ಆನೆಮಜಲು ಶಿವಾರ್ಪಣಂ ನಿಧಿ ಕೂಪನ್ ಬಿಡುಗಡೆಗೊಳಿಸುವರು. ವಿವಿಧ ಗಣ್ಯರು ಉಪಸ್ಥಿತರಿರುವರು..
ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಶ್ರೀ ಕ್ಷೇತ್ರದಲ್ಲಿ ಜರಗಿತು..
ಶ್ರೀ ಕ್ಷೇತ್ರ ಜೀರ್ಣೋದ್ಧಾರ ಸಮಿತಿಯ ಗೌರವ ಸಲಹೆಗಾರರಾದ ಶ್ರೀ ಗೋಪಾಲಕೃಷ್ಣ ಪೈ ಬದಿಯಡ್ಕ ಮತ್ತು ಮದೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಧಾನ ಕಾರ್ಯದರ್ಶಿ ಶ್ರೀ ಜಯದೇವ ಖಂಡಿಗೆ ಜಂಟಿಯಾಗಿ ಬಿಡುಗಡೆಗೊಳಿಸಿದರು.ಆಡಳಿತ ಮಂಡಳಿ ಅಧ್ಯಕ್ಷ ವೆಂಕಟ್ರಮಣ ಭಟ್ ಚಂಬಲ್ತಿ ಮಾರ್, ಜೀರ್ಣೋದ್ದಾರ ಸಮಿತಿ ಪ್ರಧಾನ ಕಾರ್ಯದರ್ಶಿ ಪಿಜಿ.ಜಗನ್ನಾಥ ರೈ, ಟ್ರಸ್ಟೀ ಸೀತಾರಾಮ ನವಕಾನ, ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿ ಶ್ರೀ ನಿರಂಜನ ರೈ ಪೆರಡಾಲ, ಮಾಜಿ ಮೊಕ್ತೇಸರ ಶ್ರೀ ಪಿಜಿ ಚಂದ್ರಹಾಸ ರೈ, ಯುವ ಸಮಿತಿ ಕಾರ್ಯದರ್ಶಿ ಶ್ರೀ ಭಾಸ್ಕರ ಪಂಜಿತಡ್ಕ, ಜನಪ್ರತಿನಿಧಿ ಶ್ರೀ ರವಿಕುಮಾರ ರೈ ಪೆರಡಾಲ, ಜೀರ್ಣೋದ್ದಾರ ಸಮಿತಿ ಪದಾಧಿಕಾರಿಗಳಾದ ಉದಯ ಶಂಕರ್ ಪಿ ಎಸ್, ಜಗನ್ನಾಥ ರೈ ಕೊರೆಕಾನ, ಮಾತೃ ಸಮಿತಿಯ ವಿನಯ ಜೇ ರೈ,ಗೀತಾ ಭಟ್ ಸಂಘ ಸಂಸ್ಥೆ ಪದಾಧಿಕಾರಿಗಳು ಸದಸ್ಯರು ಅರ್ಚಕ ವೃಂದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು..
0 Comments