Ticker

6/recent/ticker-posts

Ad Code

ಅತಿ ತೀವ್ರ ಮಳೆ ಸಾಧ್ಯತೆ, ಕಾಸರಗೋಡು ಸಹಿತ 4 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ


 ತಿರುವನಂತಪುರಂ: ರಾಜ್ಯದಲ್ಲಿ ‌ಅತಿ ತೀವ್ರ ಮಳೆ ಬರಲಿದೆಯೆಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಕಾಸರಗೋಡು ಸಹಿತ ಉತ್ತರ ಕೇರಳದ 4 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕಾಸರಗೋಡು, ಕಣ್ಣೂರು, ಕೋಜಿಕ್ಕೋಡ್, ವಯನಾಡ್ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. 


ನೆರೆಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲೂ ರೆಡ್ ಅಲರ್ಟ್ ಇದೆ. ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಳೆಯ ಜತೆ ಸಿಡಿಲು, ಅತಿ ವೇಗದ ಗಾಳಿಯೂ ಬೀಸಲಿದೆ. ಸಾರ್ವಜನಿಕರು ಎಚ್ಚರ ವಹಿಸುವಂತೆ ಕರೆ ನೀಡಲಾಗಿದೆ.



    ತೀವ್ರ ಮಳೆಯ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯ ವಿವಿದೆಡೆ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಕರಂದಕ್ಕಾಡು, ಚೆರ್ಕಳ ಎಂಬೆಡೆ ರಸ್ತೆಗೆ ಮರ ಬಿದ್ದಿದೆ. ಗ್ರಾಮೀಣ ಪ್ರದೇಶದ ಹಲವೆಡೆ ವಾಹನ ಸಂಚಾರ ಅಸ್ತವ್ಯಸ್ತಗೊಂಡ ಬಗ್ಗೆ ವರದಿಯಾಗಿದೆ. ರಸ್ತೆಯಲ್ಲಿ ವಾಹನಗಳ ಚಕ್ರ ಹೂತು ಹೋದ ಘಟನೆಯೂ ನಡೆದಿದೆ

Post a Comment

0 Comments