ಮಂಜೇಶ್ವರ: ಮಂಗಳೂರಿನಿಂದ ಕಾಸರಗೋಡು ಭಾಗಕ್ಕೆ ಕೆ.ಎಸ್.ಆರ್.ಟಿ.ಸಿ.ಬಸ್ಸಿನಲ್ಲಿ ಸಾಗಿಸುತ್ತಿದ್ದ 20 ಕಿಲೊ ನಿಷೇಧಿತ ತಂಬಾಕು ಉತ್ಪನ್ನಗಳನ್ನು ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇದಕ್ಕೆ ಸಂಬಂದಪಟ್ಟಂತೆ ಕಾಸರಗೋಡು ನಿವಾಸಿ ಅಭಿಷೇಕ್ ಎಂಬಾತನನ್ನು ಬಂಧಿಸಲಾಗಿದೆ. ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ಕೆಮು ತಂಡ ಹಾಗೂ ಎಕ್ಸ್ಪ್ರೆಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ತಂಬಾಕು ಉತ್ಪನ್ನಗಳನ್ನು ವಶಪಡಿಸಲಾಗಿದೆ.
ಎಕ್ಸ್ಪ್ರೆಸ್ ಸರ್ಕಲ್ ಇನ್ಸ್ಪೆಕ್ಟರ್ ಪ್ರಸನ್ನನ್.ಜಿ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಎಕ್ಸ್ಪ್ರೆಸ್ ಇನ್ಸ್ಪೆಕ್ಟರ್ ಆದರ್ಶ್ ಜಿ, ಕೆಮು ಪ್ರಿವೆಂಟಿವ್ ಆಫೀಸರ್ ಮಂಜುನಾಥ ಆಳ್ವ, ಇತರ ಅಧಿಕಾರಿಗಳಾದ ಸುಬಿನ್ ಫಿಲಿಫ್, ಸನಲ್ ಕುಮಾರ್, ಮೊಯ್ದೀನ್ ಸಾದಿಕ್, ಪ್ರಶಾಂತ್ ಕುಮಾರದ ವಿ, ರಾಹುಲ್ ಟಿ ಮೊದಲಾದವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದರು
0 Comments