Ticker

6/recent/ticker-posts

ಮಳೆ ಮುನ್ಸೂಚನೆಯಲ್ಲಿ ಬದಲಾವಣೆ, ರಾಜ್ಯದ 3 ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ಕಾಸರಗೋಡು ಸಹಿತ ವಿವಿದ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ


 ತಿರುವನಂತಪುರಂ:  ರಾಜ್ಯದಲ್ಲಿ ಮಳೆಯ ಮುನ್ಸೂಚನೆಯಲ್ಲಿ ಭಾರೀ ಬದಲಾವಣೆ ಉಂಟಾಗಿದೆ.  ಇಂದು  ಸಾಯಂಕಾಲ ಹಾಗೂ ರಾತ್ರಿ ಮಧ್ಯ ಕೇರಳದಲ್ಲಿ ಭಾರೀ ಮಳೆ ಬರಲಿದೆಯೆಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ 3 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇಡುಕ್ಕಿ, ಮಲಪ್ಪುರಂ, ವಯನಾಡ್ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಆಗಿರುತ್ತದೆ. ಕೊಟ್ಟಯಂ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಕೋಜಿಕ್ಕೋಡ್ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಆಗಿರುತ್ತದೆ. ಕಾಸರಗೋಡು, ಕಣ್ಣೂರು ಜಿಲ್ಲೆಗಳಲ್ಲಿಯೂ ಭಾರೀ ಪ್ರಮಾಣದ ಮಳೆ ಬರಲಿದೆ. ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿಯಾಗಿದ್ದು ಇದರ ಪರಿಣಾಮವಾಗಿ ಭಾರೀ ಮಳೆ ಬರಲಿದೆಯೆಂದು ಹವಾಮಾನ ಇಲಾಖೆ ತಿಳಿಸಿದೆ

Post a Comment

0 Comments