ತಿರುವನಂತಪುರಂ: ಕಾಸರಗೋಡು ಸಹಿತ ಉತ್ತರ ಕೇರಳದ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಮುಂದುವರಿಯಲಿದೆ. ಕಾಸರಗೋಡು, ಕಣ್ಣೂರು, ವಯನಾಡ್, ಕೋಜಿಕ್ಕೋಡ್, ಮಲಪ್ಪುರಂ ಜಿಲ್ಲೆಗಳಲ್ಲಿ ಇಂದು ರಾತ್ರಿಯೂ ರೆಡ್ ಅಲರ್ಟ್ ಇರಲಿದೆ. ಕಾಸರಗೋಡು, ಕಣ್ಣೂರು ಜಿಲ್ಲೆಯ ವಿವಿದೆಡೆ ಇಂದು ಮತ್ತು ನಾಳೆ ದಡೀರನೆ ಮಳೆ, ಬಿರುಗಾಳಿ ಕಾಣಿಸಿಕೊಳ್ಳಲಿದೆಯೆಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ. ನಾಳೆಯಿಂದ ಮಳೆ ಕಡಿಮೆಯಾಗಲಿದೆ.
ಇದೇ ವೇಳೆ ಮಣ್ಣು ಜರಿತ ವ್ಯಾಪಕಗೊಂಡ ಹಿನ್ನೆಲೆಯಲ್ಲಿ ಚೆರ್ಕಳ- ಬೇವಿಂಜೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಅಂಬ್ಯುಲನ್ಸ್, ತುರ್ತು ವಾಹನಗಳು ಮಾತ್ರ ಈ ರಸ್ತೆಯಲ್ಲಿ ಸಾಗಲಿದೆ. ಇತರ ವಾಹನಗಳು ಬೇರೆ ರಸ್ತೆಯನ್ನು ಆಶ್ರಯಿಸಬೇಕು ಎಂದು ಜಿಲ್ಲಾಧಿಕಾರಿ ಕಚೇರಿ ತಿಳಿಸಿದೆ. ಇದೇ ವೇಳೆ ತೀವ್ರ ಮಳೆ ಹಾಗೂ ಗಾಳಿಯಿಂದಾಗಿ ವಿವಿದೆಡೆ ವ್ಯಾಪಕ ನಾಶ ನಷ್ಟ ಉಂಟಾಗಿದೆ.
0 Comments