Ticker

6/recent/ticker-posts

ಎಡನೀರು ಮಠಾಧೀಶರಾದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ 5 ನೇ ಚಾತುರ್ಮಾಸ್ಯ ವ್ರತಾಚರಣೆ: ಕಾಸರಗೋಡು ವಲಯ ಸಮಿತಿ ರೂಪೀಕರಣ


 ಶ್ರೀಮದ್ ಎಡನೀರು ಮಠಾಧೀಶರಾದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ 5 ನೇ ಚಾತುರ್ಮಾಸ್ಯ ವ್ರತಾಚರಣೆ ಅಂಗವಾಗಿ ಕಾಸರಗೋಡು ವಲಯ ಸಮಿತಿಯ ಸಭೆಯು ಕಾಸರಗೋಡು ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಜರಗಿತು. ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಅಸ್ರ ಅವರ ಅಧ್ಯಕ್ಷತೆಯಲ್ಲಿ ಜರಗಿದ ಸಭೆಯಲ್ಲಿ ವಲಯ ಸಮಿತಿಯನ್ನು ರೂಪೀಕರಿಸಲಾಯಿತು. ಚಾತುರ್ಮಾಸ್ಯದ ಅಂಗವಾಗಿ ಜುಲಾಯಿ ತಿಂಗಲ 27 ನೇ ಆದಿತ್ಯವಾರ ಕಾಸರಗೋಡಿನಿಂದ ಹೊರೆಕಾಣಿಕೆ ಸಹಿತ ವಿವಿಧ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದಾಗಿ ತೀರ್ಮಾನಿಸಲಾಯಿತು. ವಲಯ ಸಮಿತಿ ರಕ್ಷಾಧಿಕಾರಿಯಾಗಿ ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಅಸ್ರ, ಗೌರವಾಧ್ಯಕ್ಷರಾಗಿ ಶ್ರೀ ರಾಮ್ ಪ್ರಸಾದ್ ಕಾಸರಗೋಡು, ಅಧ್ಯಕ್ಷರಾಗಿ ಡಾl ಕೆ.ಎನ್. ವೆಂಕಟ್ರಮಣ ಹೊಳ್ಳ, ಉಪಾಧ್ಯಕ್ಷರಾಗಿ ಅಶೋಕ ನಾಯ್ಕ್, ಕಾರ್ಯದರ್ಶಿಯಾಗಿ ಕೆ. ಜಗದೀಶ್ ಕೂಡ್ಲು, ಕೋಶಾಧಿಕಾರಿಯಾಗಿ ಗುರುಪ್ರಸಾದ್ ಕೋಟೆಕಣಿ, ಪ್ರದೀಪ್ ಬೇಕಲ್, ಸೂರ್ಯಕಾಂತಿ, ಶ್ರೀಲತಾ ಮೊದಲಾದವರನ್ನು ಆಯ್ಕೆಮಾಡಲಾಯಿತು. ಡಾl ಕೆ.ಎನ್. ವೆಂಕಟ್ರಮಣ ಹೊಳ್ಳ ಇವರು ಪ್ರಾಸ್ತಾವಿಕ ನುಡಿಗಳನ್ನಾಡಿ ಕೆ.ಜಗದೀಶ್ ಕೂಡ್ಲು ಸ್ವಾಗತಿಸಿ ಕೆ.ಎನ್. ರಾಮಕೃಷ್ಣ ಹೊಳ್ಳ ವಂದಿಸಿದರು ಗುರುಪ್ರಸಾದ್ ಕೋಟೆಕಣಿ ಕಾರ್ಯಕ್ರಮ ನಿರೂಪಿಸಿದರು.

Post a Comment

0 Comments