ಬದಿಯಡ್ಕ ಕುಂಬ್ಡಾಜೆ ಸಾರ್ವಜನಿಕ ಶ್ರೀ ಗಣೇಶೋತ್ಸವದ 2ನೇ ವರ್ಷದ ಗಣೇಶೋತ್ಸವ 2025 ಆಗಸ್ಟ್ 27 ಕ್ಕೆ ಮವ್ವಾರಿನ ಶ್ರೀ ಗಣೇಶ ಭಜನಾ ಮಂದಿರದಲ್ಲಿ ನಡೆಯಲಿದೆ, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಜರಗಿತು. 2ನೇ ವರ್ಷದ ಕುಂಬ್ಡಾಜೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾದ ರಾಮಚಂದ್ರ ಮಾರ್ಪನಡ್ಕರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಗಲ್ಪಾಡಿ ದೇವಸ್ಥಾನದ ಆಡಳಿತ ಮೊಕ್ತೇಸರಾದ ವಿಶ್ವನಾಥ ಭಟ್ ಬೇಂದ್ರೋಡಿಯವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಶ್ರೀಮತಿ ಜಯಲಕ್ಷ್ಮಿ ಶಿವಶಂಕರ್ ನೆಕ್ರಾಜೆ ರವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಪ್ರಮುಖರಾದ ಸಿ ಎಚ್ ಕೃಷ್ಣ ಮಾಸ್ಟರ್, ತಂತ್ರಿ ವರ್ಯರಾದ ಶಂಕರನಾರಾಯಣ ಭಟ್, ಗಣೇಶೋತ್ಸವದ ನಿಕಟಪೂರ್ವ ಅಧ್ಯಕ್ಷರಾದ ವೇಣುಗೋಪಾಲ ಕಳಯತ್ತೋಡಿ ಮೊದಲಾದವರು ಉಪಸ್ಥಿತರಿದ್ದರು.
ಗಣೇಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಹರೀಶ್ ಗೋಸಾಡ ಸ್ವಾಗತಿಸಿ, ಕೋಶಾಧಿಕಾರಿ ಗೋಪಾಲಕೃಷ್ಣ ಮಾಸ್ಟರ್ ಕಾನಕಜೆ ವಂದಿಸಿದರು. ರಮೇಶ್ ಪದ್ಮಾರ್ ನಿರೂಪಿಸಿದರು.
0 Comments