ಬದಿಯಡ್ಕ : 2025-26 ಶೈಕ್ಷಣಿಕ ವರ್ಷದ ಶಾಲಾ ಪ್ರವೇಶೋತ್ಸವವು ಕುಂಟಿಕಾನ ಅನುದಾನಿತ ಹಿರಿಯ ಬುನಾದಿ ಶಾಲೆಯಲ್ಲಿ ವಿಜೃಂಭಣೆಯಿಂದ ಜರಗಿತು. ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಎಂ. ಉದ್ಘಾಟಿಸಿದರು. ಬ್ಲಾಕ್ ಪಂಚಾಯತ್ ಸದಸ್ಯೆ ಶ್ರೀಮತಿ ಜಯಂತಿ ಎಂ. ಮುಖ್ಯ ಅತಿಥಿಯಾಗಿದ್ದರು. ಪಿಟಿಎ ಅಧ್ಯಕ್ಷರಾದ ಕೃಷ್ಣ ಪ್ರಸಾದ್ ಎಸ್ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತೃ ಸಂಘದ ಅಧ್ಯಕ್ಷೆ ಶ್ರೀಮತಿ ಶೀಬಾ ಪಿ.ವಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಜೋನಿ ಡಿಸೋಜಾ, ಶಾಲಾ ವ್ಯವಸ್ಥಾಪಕರಾದ ಶ್ರೀ ಶಂಕರನಾರಾಯಣ ಶರ್ಮ, ಅಧ್ಯಾಪಕರಾದ ಶ್ರೀ ಪ್ರಶಾಂತ್ ಕುಮಾರ್ ಕೆ, ಸುದರ್ಶನ ಎ. ಶುಭ ಹಾರೈಸಿದರು.
ನವಾಗತ ಪುಟಾಣಿ ಮಕ್ಕಳಿಗೆ ಬ್ಯಾಗ್, ಪುಸ್ತಕ ಹಾಗೂ ಪರಮೇಶ್ವರ ನಾಯ್ಕ್ ಕೆರೆಕೋಡಿ ಯವರು ಕೊಡ ಮಾಡಿದ ಕಲಿಕೋಪಕರಣಗಳನ್ನೂ ವಿತರಿಸಲಾಯಿತು. ವಿದ್ಯಾರ್ಥಿಗಳಾದ ಭೂಮಿಕ ಆರ್.ಕೆ, ಹರ್ಷಿತ, ಸುಶ್ಮಿತ ಪ್ರಾರ್ಥನೆ ಹಾಡಿದರು. ಮುಖ್ಯೋಪಾಧ್ಯಾಯರಾದ ಶ್ರೀ ಎ.ರಾಧಾಕೃಷ್ಣನ್ ಸ್ವಾಗತಿಸಿ ಸ್ಟಾಪ್ ಸೆಕ್ರೆಟರಿ ಪ್ರಶಾಂತ ಕುಮಾರ್ ಬಿ. ವಂದಿಸಿದರು. ಅಧ್ಯಾಪಕರಾದ ಅನ್ವಿತ್ ಹಾಗೂ ಸಿದ್ದಾರ್ಥ್ ಕಾರ್ಯಕ್ರಮ ನಿರೂಪಿಸಿದರು.
0 Comments