Ticker

6/recent/ticker-posts

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯಾಲಯದಲ್ಲಿ ಡಾ.ಶ್ಯಾಮ ಪ್ರಸಾದ್ ಮುಖರ್ಜಿ ಸಂಸ್ಮರಣೆ


 ಕಾಸರಗೋಡು:  ಡಾ.ಶ್ಯಾಮಪ್ರಸಾದ್ ಮುಖರ್ಜಿಯವರ ಬಲಿದಾನದಿಂದ ಉಂಟಾದ ಪ್ರಚೋದನೆಯೇ ಆಪರೇಶನ್ ಸಿಂಧೂರದ ವಿಜಯ ಎಂದು ಬಿಜೆಪಿ ಮುಖಂಡ ಪಿ.ರಮೇಶ್ ಹೇಳಿದರು.  ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ನಡೆದ ಜನಸಂಘ ಸ್ಥಾಪಕ ಡಾ.ಶ್ಯಾಮಪ್ರಸಾದ್ ಮುಖರ್ಜಿ ಸಂಸ್ಮರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಾ ಈ ರೀತಿ ಹೇಳಿದರು.‌ಜಮ್ಮು‌ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನ 370 ನೇ ವಿಧಿಯ ವಿರುದ್ದ ಮೊದಲ ಬಾರಿಗೆ ಹೋರಾಟ ನಡೆಸಿದ ಹೆಗ್ಗಳಿಕೆ ಶ್ಯಾಮಪ್ರಸಾದ್ ಮುಖರ್ಜಿಯವರದ್ದು.‌ನೆಹರೂ ಸಚಿವ ಸಂಪುಟದಲ್ಲಿ ಕೈಗಾರಿಕಾ ಸಚಿವರಾಗಿಯೂ ರಾಷ್ಟ್ರದ ಒಳಿತಿಗಾಗಿ ಸಚಿವ ಪದವಿ ತ್ಯಜಿಸಿದವರು. ‌370 ನೇ ವಿಧಿ ರದ್ದುಗೊಳಿಸುವ ಮೂಲಕ ಮುಖರ್ಜಿಯವರ ಕನಸನ್ನು ನರೇಂದ್ರ ಮೋದಿಯವರು ನನಸಾಗಿಸಿದರು ಎಂದವರು ಹೇಳಿದರು.

ಕಾರ್ಯಕ್ರಮವನ್ನು ಪಕ್ಷದ ಜಿಲ್ಲಾ ಅಧ್ಯಕ್ಷೆ ಅಶ್ವಿನಿ ಎಂ.ಎಲ್ ಉದ್ಘಾಟಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಆರ್.ಸುನಿಲ್, ಇತರರಾದ ಸವಿತ ಟೀಚರ್, ವೈ.ಕೃಷ್ಣದಾಸ್ ಮೊದಲಾದವರು ಉಪಸ್ಥಿತರಿದ್ದರು

Post a Comment

0 Comments