ವಿದ್ಯಾರ್ಥಿಗಳು ಉತ್ತಮ ವಿದ್ಯಾಭ್ಯಾಸ ಹೊಂದುವುದರೊಂದಿಗೆ ಉತ್ತಮ ಸಂಸ್ಕಾರವಂತರಾಗಬೇಕು. ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ
ಕಾಸರಗೋಡು:ವಿದ್ಯಾರ್ಥಿಗಳು ಉತ್ತಮ ವಿದ್ಯಾಭ್ಯಾಸ ಹೊಂದುವುದರೊಂದಿಗೆ ಉತ್ತಮ ಸಂಸ್ಕಾರವಂತರಾಗಬೇಕು. ಉತ್ತಮ ಸಂಸ್ಕಾರ ಹೊಂದಬೇಕಾದರೆ ಪಠ್ಯ ಪುಸ್ತಕ ಮಾತ್ರವಲ್ಲದೆ ಇತರ ಉತ್ತಮ ಪುಸ್ತಕಗಳನ್ನು ಓದಬೇಕು.ಆಗ ಭಾಷಾ ಸ್ನೇಹ, ಸಾಹಿತ್ಯ ಸಂಪರ್ಕ, ತನ್ ಮೂಲಕ ಉತ್ತಮ ಸಾಮಾಜಿಕ ಕಳಕಳಿಯ ಸಂಸ್ಕಾರ ಮೈಗೂಡಿ ಸಮಾಜಕ್ಕೆ ಹಿತವಾಗುವ ವ್ಯಕ್ತಿಗಳಾಗಿ ವಿದ್ಯಾರ್ಥಿಗಳು ರೂಪುಗೊಳ್ಳಬೇಕು ಎಂದು ಡಾ.ಕೆ.ಎನ್ ವೆಂಕಟರಮಣ ಹೊಳ್ಳ ಅಭಿಪ್ರಾಯಪಟ್ಟರು.
ಅವರು ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ ದಲ್ಲಿ, ನಗರದ ಭಾಲ ಭವನ ವಿದ್ಯಾ ಕೇಂದ್ರ ಹಾಗೂ ಶ್ರೀ ವೆಂಕಟ್ರಮಣ ಕೃಪಾಶ್ರಿತ ಯಕ್ಷಗಾನ, ಅಧ್ಯಯನ, ಸಂಶೋಧನ ಕೇಂದ್ರ ಸಂಯುಕ್ತ ಆಶ್ರಯದಲ್ಲಿ ನಡೆದ ಗ್ರಂಥಾಲಯ ವಾಚನ ವಾರಾಚರಣೆ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಕನ್ನಡ ಭವನ ಗ್ರಂಥಾಲದ ಸ್ಥಾಪಕರಾದ ಡಾ. ವಾಮನ್ ರಾವ್ ಬೇಕಲ್ ಅಧ್ಯಕ್ಷತೆ ವಹಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ನಗರದ ಬಿ. ಇ. ಎಂ ಹೈಯರ್ ಸೆಕೆಂಡರಿ ಪ್ರಾಂಶುಪಾಲರಾದ ರಾಜೇಶ್ ಚಂದ್ರ ಕೆ. ಪಿ., ಪತ್ರಕರ್ತ ಜಗನ್ನಾಥ್ ಶೆಟ್ಟಿ, ಮಾತನಾಡಿದರು. ಬಾಲಭವನ ಮುಖ್ಯೋಪಾಧ್ಯಾಯಿನಿ ಲೀಲಾವತಿ ನಾಯರ್, ಅದ್ಯಾಪಿಕೆ ಜಯಂತಿ, ಸಙಕೀರ್ತನಾ ಸಾಮ್ರಾಟ್ ಜಯಾನಂದ ಕುಮಾರ್ ಹೊಸದುರ್ಗ, ಪತ್ರಕರ್ತ ಜಯ ಮಣಿಯಂಪಾರೆ ಪಾರೆ, ಪತ್ರಕರ್ತ ಪ್ರದೀಪ್ ಬೇಕಲ್, ವಿದ್ಯಾರ್ಥಿಗಳಿಗೆ ಸಂಪನ್ಮೂಲ ವ್ಯಕ್ತಿಗಳಾಗಿ ತರಗತಿ ನಡೆಸಿದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕಿ ಜಯಂತಿ ಟೀಚರನ್ನು ಕನ್ನಡ ಭವನದ ವತಿಯಿಂದ ಡಾ. ವಾಮನ್ ರಾವ್ ಬೇಕಲ್-ಸಂದ್ಯಾ ರಾಣಿ ಟೀಚರ್ ಅಭಿನಂದಿಸಿ ಗೌರವಿಸಿದರು. ಅತಿಥಿಗಳಿಗೆ ಸ್ಮರಣಿಕೆ ನೀಡಿ, ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು.
ಕನ್ನಡ ಭವನ ಸಾರ್ವಜನಿಕ ವಾಚನಾಲಯ ಸಂಚಾಲಕಿ ಸಂಧ್ಯಾ ರಾಣಿ ಟೀಚರ್, ಸ್ವಾಗತಿಸಿ
ಕನ್ನಡ ಭವನ ಕಾರ್ಯದರ್ಶಿ ವಸಂತ್ ಕೆರೆಮನೆ ವಂದಿಸಿದರು.
0 Comments