Ticker

6/recent/ticker-posts

ಹದಿನೆಂಟು ದಿನಗಳಿಂದ ಕತ್ತಲೆಯಲ್ಲಿ ಕಾಲ ಕಳೆದ ಜನತೆ


 ಉಪ್ಪಳ : ಇಲ್ಲಿನ ಸಿಟಿ ಸೆಂಟರ್ ಇಂಡೋರ್ ಟ್ರಾನ್ಸ್ಫಾರ್ಮರ್ ಹಾಳಾಗಿ ವಾರಗಳು ಕಳೆದರೂ ದುರಸ್ತಿ ಭಾಗ್ಯವಿಲ್ಲ 

ಉಪ್ಪಳ ತಾಲೂಕು ಕಚೇರಿಯ ಪರಿಸರದಲ್ಲಿರುವ ಟ್ರಾನ್ಸ್ಫಾರ್ಮರ್ ಹಾಳಾಗಿ 18 ದಿನಗಳಾದರೂ ದುರಸ್ತಿಯಾಗದೆ ಇರುವ ಹಿನ್ನೆಲೆಯಲ್ಲಿ ಸಮೀಪ ಪ್ರದೇಶಗಳಲ್ಲಿನ ಜನರು ಕತ್ತಲಲ್ಲೇ ಕಾಲ ಕಳೆಯುವಂತಾಗಿದೆ. ವಿದ್ಯುತ್ ಸಂಪರ್ಕ ಕಡಿತಗೊಂಡು 18 ದಿನಗಳಾದರೂ ವಿದ್ಯುತ್ ಸಂಪರ್ಕ ಮರು ಸ್ಥಾಪನೆ ಯಾಗದೇ ಇರುವ ಹಿನ್ನೆಲೆಯಲ್ಲಿ ಸಮೀಪದ ಮಂಜೇಶ್ವರ ತಾಲೂಕು ಕಚೇರಿಯ ಕೆಲಸ ಕಾರ್ಯಗಳು ಪೂರ್ತಿ ಆಗದೆ ಸ್ಥಗಿತಗೊಂಡಿದೆ. 


ಅಲ್ಲದೆ ಸಮೀಪದಲ್ಲಿ ಕಾರ್ಯಾಚರಿಸುತ್ತಿರುವ ಇತರ ವ್ಯಾಪಾರ ಸಂಸ್ಥೆಗಳು ಕೂಡ ವಿದ್ಯುತ್ ಇಲ್ಲದೇ ಪರದಾಡುವ ಪರಿಸ್ಥಿತಿ ಉಂಟಾಗಿದೆ. ವಿದ್ಯುತ್ ಇಲಾಖೆಯ ಅಧಿಕಾರಿಗಳಿಗೆ ಈ ಕುರಿತಾಗಿ ಲಿಖಿತ ದೂರು ನೀಡಿದರೂ ಯಾವುದೇ ಪ್ರಯೋಜನ ಉಂಟಾಗಿಲ್ಲ, ಮಂಜೇಶ್ವರ ಶಾಸಕರ ಕಚೇರಿ ವ್ಯಾಪ್ತಿಯಲ್ಲಿಯೇ ಈ ಘಟನೆ ನಡೆದರೂ  ಸಂಬಂಧಪಟ್ಟವರ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Post a Comment

0 Comments