ಪೆರ್ಲ: ಸ್ವರ್ಗ ಸ್ವಾಮಿ ವಿವೇಕಾನಂದ ಎ.ಯು.ಪಿ ಶಾಲೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಕಾರ್ತಿಕ್ ಶಾಸ್ತ್ರಿ ಖಂಡೇರಿಯವರ ಅಧ್ಯಕ್ಷತೆಯಲ್ಲಿ ಜರಗಿತು.ಕಾರ್ಯಕ್ರಮದಲ್ಲಿ ತೆರವಾದ ಸಮಿತಿ ಪದಾಧಿಕಾರಿಗಳ ಸ್ಥಾನಕ್ಕೆ ಹೊಸಬರನ್ನು ಆಯ್ಕೆ ಮಾಡಲಾಯಿತು.ಅದೇ ರೀತಿಯಲ್ಲಿ ಕಳೆದ ಶೈಕ್ಷಣಿಕ ವರ್ಷದ ವಿವಿಧ ವ್ಯವಸ್ಥೆಗಳ ಲೆಕ್ಕಾಚಾರಗಳ ಮಂಡನೆ,ಈ ಶೈಕ್ಷಣಿಕ ವರ್ಷದ ವಿವಿಧ ವ್ಯವಸ್ಥೆಗಳ ಬಗ್ಗೆ ಮಾಹಿತಿಯನ್ನು ನೀಡಲಾಯಿತು.ಮುಖ್ಯ ಶಿಕ್ಷಕಿ ಗೀತಾಕುಮಾರಿ ವರದಿ ವಾಚಿಸಿದರು.ಹಿರಿಯ ಶಿಕ್ಷಕ ವೆಂಕಟ ವಿದ್ಯಾಸಾಗರ್ ಸ್ವಾಗತಿಸಿ, ಶಿಕ್ಷಕ ಮಂಜುನಾಥ್ ವಂದಿಸಿದರು.ಹಿರಿಯ ಶಿಕ್ಷಕ ಸಚ್ಚಿದಾನಂದ ಕಾರ್ಯಕ್ರಮ ನಿರೂಪಿಸಿದರು.ವಾರ್ಡ್ ಸದಸ್ಯ ರಾಮಚಂದ್ರ ಎಂ, ಶಾಲಾ ವ್ಯವಸ್ಥಾಪಕ ಹೃಷಿಕೇಶ್ ವಿ ಎಸ್, ರಕ್ಷಕರು,ಅಧ್ಯಾಪಕ, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
0 Comments