ಮಂಗಳೂರು: ಸಕ್ರಿಯ ಹಿಂದು ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್.ಐ.ಎ.ವಹಿಸಿಕೊಳ್ಳಲಿದೆ. ಪ್ರಕರಣದಲ್ಲಿ ಅಂತರಾಷ್ಟ್ರೀಯ ಗೂಡಾಲೋಚನೆ ನಡೆದಿದೆ ಎಂಬ ಮಾಹಿತಿಯನ್ವಯ ತನಿಖೆಯನ್ನು ಎನ್.ಐ.ಎ.ಗೆ ನೀಡಲು ನಿರ್ದರಿಸಲಾಗಿದೆ. ಈ ಕುರಿತು ಕೇಂದ್ರ ಗೃಹಖಾತೆ ಆದೇಶ ಹೊರಡಿಸಿದೆ.
ಮೇ.1.ರಂದು ಮಂಗಳೂರಿನ ಬಜಪೆ ಬಳಿಯ ಕಿನ್ನಿಪದವಿನಲ್ಲಿ ದುಷ್ಕರ್ಮಿಗಳ ಗುಂಪೊಂದು ಸುಹಾಸ್ ಶೆಟ್ಟಿಯವರನ್ನು ತಲವಾರಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿತ್ತು. ಈ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡ ಮಂಗಳೂರು ಸಿಸಿಬಿ ಪೊಲೀಸರು 12 ಆರೋಪಿಗಳನ್ನು ಬಂಧಿಸಿದ್ದರು. ರಾಜ್ಯಾದ್ಯಂತ ಸಂಚಲನ ಮೂಡಿಸಿದ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್.ಐ.ಗೆ.ವಹಿಸುವಂತೆ ಬಿಜೆಪಿ ಒತ್ತಾಯಿಸಿತ್ತು.
0 Comments