ಕಾಸರಗೋಡು : ನಗರದ ಬಿ.ಇ.ಎಂ. ಎಚ್.ಎಸ್.ಎಸ್ ಶಾಲಾ ವಿದ್ಯಾರ್ಥಿಗಳು ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕಾಸರಗೋಡು ನಗರ ಮರಣಿಗೆಯೊಂದಿಗೆ ಹಳೆ ಬಸ್ ನಿಲ್ದಾಣದಲ್ಲಿ ಪರಿಸರ ಸಂರಕ್ಷಣೆ ಸಂದೇಶ ಸಾರುವ ನೃತ್ಯ ಕಾರ್ಯಕ್ರಮ ಹಾಗೂ ಶಾಲೆಯಲ್ಲಿ ನಗರಸಭಾ ಅಧ್ಯಕ್ಷರಾದ ಶ್ರೀ ಅಬ್ಬಾಸ್ ಬೀಗಂ, ಟೌನ್ ಸಬ್ ಇನ್ ಸ್ಪೆಕ್ಟರ್ ಶ್ರೀ ಶಶಿಧರನ್ ಕಲ್ಪ ವೃಕ್ಷ ಗಿಡ ನೆಟ್ಟರು.
ಈ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಶ್ರೀ ರಾಜೇಶ್ಚಂದ್ರ, ನಗರಸಭಾ ಸದಸ್ಯೆ ಶ್ರೀಮತಿ ಶ್ರೀಲತಾ ಟೀಚರ್, ಸಾರ್ವಜನಿಕ ಶಿಕ್ಷಣ ಸಂರಕ್ಷಣಾ ಯಜ್ಞ ಸಮಿತಿ ಅಧ್ಯಕ್ಷರಾದ ಡಾ| ಕೆ.ಎನ್. ವೆಂಕಟ್ರಮಣ ಹೊಳ್ಳ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಪ್ರೇಮ್ಜಿತ್, ಶಾಲಾ ಪ್ರಾಧ್ಯಾಪಕರಾದ ಶ್ರೀ ಶಾಜಿ, ಹರಿನಾಥ್, ಎನ್.ಸಿ.ಸಿ, ಗೈಡ್ ಹಾಗೂ ಎನ್.ಎಸ್.ಎಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
0 Comments