Ticker

6/recent/ticker-posts

ದೇಲಂಪಾಡಿ ಶ್ರೀ ಮಹಾಲಿಂಗೇಶ್ವರ ಕ್ಷೇತ್ರದಲ್ಲಿ ದೃಢಕಲಶ ಸಂಪನ್ನ


ಪುತ್ತಿಗೆ : ಅಂಗಡಿಮೊಗರು ಗ್ರಾಮದ ಇತಿಹಾಸ ಪ್ರಸಿದ್ಧ ಮಹಾಲಿಂಗೇಶ್ವರ ಕ್ಷೇತ್ರದಲ್ಲಿ ಜೀರ್ಣೋದ್ಧಾರ ಬ್ರಹ್ಮಕಲಶಾದಿ ಕಾರ್ಯಕ್ರಮಗಳು ನಡೆದ ಬಳಿಕದ ದೃಢಕಲಶ ಶುಕ್ರವಾರ ಸಂಪನ್ನಗೊಂಡಿತು.

ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿಗಳ ನೇತೃತ್ವದಲ್ಲಿ ಗುರುವಾರ ಸಂಜೆಯಿಂದಲೇ ವಿವಿಧ ತಾಂತ್ರಿಕ ಕಾರ್ಯಕ್ರಮಗಳು ಆರಂಭಗೊಂಡಿತ್ತು. 


ಇಂದು ಪೂರ್ವಾಹ್ನ ಶ್ರೀ ಮಹಾಲಿಂಗೇಶ್ವರ ದೇವರು ಹಾಗೂ ಪರಿವಾರ ಸಾನಿಧ್ಯಗಳಿಗೆ ಕಲಶಾಧಿ ಕಾರ್ಯಗಳು ನಡೆದವು. ಜೀರ್ಣೋದ್ಧಾರ ಸಮಿತಿ,ಬ್ರಹ್ಮಕಲಶೋತ್ಸವ ಸಮಿತಿ ಹಾಗೂ ಊರ ಪರವೂರ ಭಕ್ತಾಧಿಗಳು ಪಾಲ್ಗೊಂಡಿದ್ದರು.

Post a Comment

0 Comments