ಇಚ್ಲಂಪಾಡಿ ಹಿರಿಯ ಬುನಾದಿ ಶಾಲಾ ಸಂಸ್ಥಾಪಕರ ದಿನಾಚರಣಾ ಕಾರ್ಯಕ್ರಮವು ನಡೆಯಿತು. ಶಾಲಾ ವ್ಯವಸ್ಥಾಪಕರಾದ ಶ್ರೀ ಯಂ.ಗಣೇಶ ರಾವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಕುಂಬಳೆ ಉಪಜಿಲ್ಲಾ ನಿವೃತ್ತ ವಿದ್ಯಾಧಿಕಾರಿ ಶ್ರೀ ಯತೀಶ್ ಕುಮಾರ್ ರೈ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಕುಂಬಳೆ ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಪುಷ್ಪಲತಾ ಶೆಟ್ಟಿ 2024-25 ನೇ ಸಾಲಿನ ಪ್ರತಿಭಾ ಪುರಸ್ಕಾರಗಳನ್ನು ವಿತರಿಸಿದರು. 2024-25 ವರ್ಷದ ಎಲ್.ಎಸ್.ಎಸ್.,ಯು.ಎಸ್.ಎಸ್.ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಎಚ್.ಶಿವರಾಮ ಭಟ್,ಕಾರ್ಯದರ್ಶಿ ನಿವೃತ್ತ ಅಧ್ಯಾಪಕರಾದ ಶ್ರೀ ಸುಬ್ರಹ್ಮಣ್ಯ ಭಟ್, ಮಾತೃ ಸಂಘದ ಅಧ್ಯಕ್ಷೆ ಶ್ರೀಮತಿ ಸುಧಾ ಟೀಚರ್, ಪಿಟಿಎ ಉಪಾಧ್ಯಕ್ಷರಾದ ಸುರೇಶ್ ಕೆಮ್ಮಣ್ಣು, ಮತ್ತು ನಿವೃತ್ತ ರಾಜ್ಯ ಪ್ರಶಸ್ತಿ ವಿಜೇತ ಅಧ್ಯಾಪಕರಾದ ಶ್ರೀ ವಿಶ್ವನಾಥ ಆಳ್ವ ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಬಾಲಕೃಷ್ಣ ಆಚಾರ್ಯ ಪುತ್ತಿಗೆ ಸ್ವಾಗತಿಸಿ, ಅಧ್ಯಾಪಕ ಕಾರ್ಯದರ್ಶಿ ಶ್ರೀ ಪುಷ್ಪರಾಜ ಶೆಟ್ಟಿ ವಂದಿಸಿದರು. ಅಧ್ಯಾಪಿಕೆ ಶ್ರೀಮತಿ ಸುಕೇಶಿನಿ ಎ. ಪ್ರತಿಭಾ ಪುರಸ್ಕೃತರ ವಿವರ ನೀಡಿದರು. ಅಧ್ಯಾಪಕರಾದ ಶ್ರೀ ಮೋಹನಚಂದ್ರ ಡಿ.ಕಾರ್ಯಕ್ರಮ ನಿರೂಪಿಸಿದರು. ಕೊನೆಯಲ್ಲಿ ಸಿಹಿತಿಂಡಿ ಹಂಚಲಾಯಿತು.
0 Comments