ತಿರುವನಂತಪುರಂ: ರಾಜ್ಯದಲ್ಲಿ ಇಂದು ಹಾಗೂ ನಾಳೆ ಬಿರುಸಿನ ಮಳೆ ಬೀಳುವ ಸಾಧ್ಯತೆಯಿದೆಯೆಂದು ಕೇಂದ್ರ ಹವಾಮಾನ ಇಲಾಖೆ ವರದಿ ಮಾಡಿದೆ. ಈ ಹಿನ್ನೆಲೆಯಲ್ಲಿ ಇಂದು (ಬುಧವಾರ) 5 ಜಿಲ್ಲೆಗಳಲ್ಲಿ, ನಾಳೆ (ಗುರುವಾರ) 6 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ಕಾಸರಗೋಡು, ಕಣ್ಣೂರು, ತ್ರಿಶೂರ್, ಎರ್ನಾಕುಲಂ, ಆಲಪ್ಪುಯ ಜಿಲ್ಲೆಗಳಲ್ಲಿ, ನಾಳೆ ಕಾಸರಗೋಡು,
ಕಣ್ಣೂರು, ಕೋಜಿಕ್ಕೋಡ್ ಮಲಪ್ಪುರಂ, ತ್ರಿಶೂರ್, ಎರ್ನಾಕುಲಂ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೇರಳ, ಕರ್ಣಾಟಕ, ಲಕ್ಷದ್ವೀಲ ತೀರಗಳಲ್ಲಿ ಮೀನುಗಾರಿಕೆಯನ್ನು ಸಹ ನಿಷೇಧಿಸಲಾಗಿದೆ. ಮಳೆಯ ಜತೆ ಬಿರುಗಾಳಿ, ಸಿಡಿಲು ಸಾಧ್ಯತೆಯಿದೆ
0 Comments