ಕಾಸರಗೋಡು ಮಲ್ಲಿಕಾರ್ಜುನ ಕ್ಷೇತ್ರ ವಠಾರದಲ್ಲಿ ಆಗಸ್ಟ್ 27ರಿಂದ ಸೆಪ್ಟೆಂಬರ್ 6ರ ವರೆಗೆ ಜರುಗಲಿರುವ 70ನೇ ವರುಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಯಜ್ಞಕುಂಡ ಮುಹೂರ್ತ ಶ್ರೀ ರಮೇಶ್ ಕಾರಂತ ಅವರ ನಿರ್ದೇಶನದಲ್ಲಿ ಜರಗಿತು. ಈ ಸಂದರ್ಭದಲ್ಲಿ ಕ್ಷೇತ್ರದ ಪ್ರಧಾನ ಅರ್ಚಕ ಶ್ರೀ ಶಿವಶಂಕರ ಅಡಿಗ ಸಮಿತಿ ಅಧ್ಯಕ್ಷ ಎಡ್ವಕೇಟ್ ಮುರಳೇಧರ, ಉಪಾಧ್ಯಕ್ಷರಾದ ಡಾ. ಕೆ.ಎನ್. ವೆಂಕಟ್ರಮಣ ಹೂಳ್ಳ, ಶ್ರೀ ಪಿ. ರಮೇಶ್, ಪ್ರಧಾನ ಕಾರ್ಯದರ್ಶಿ ಶ್ರೀ ಕಮಲಾಕ್ಷ ಕೆ.ಎನ್., ಕಾರ್ಯದರ್ಶಿ ರವಿ ಕೇಸರಿ, ರವಿ ಕೇಳುಗುಡ್ಡೆ, ಕೋಶಾಧಿಕಾರಿ ಶ್ರೀ ಅಶೋಕ್ ಕುಮಾರ್, ಶ್ರೀ ಉಮೇಶ್ ಮೇಸ್ತ್ರಿ , ಲವ ಮೀಪುಗುರಿ, ಹಾಗೂ ಭಗವದ್ ಭಕ್ತರು ಉಪಸ್ಥಿತರಿದ್ದರು.
0 Comments