Ticker

6/recent/ticker-posts

Ad Code

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟೆನೆಂದು ಸುಳ್ಳುಗಳ ಸರಮಾಲೆ ಸೃಷ್ಟಿಸಿದ ಮುಸುಕುಧಾರಿಯ ಬಂಧನ




ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟನೆಂದು ಸುಳ್ಳುಗಳ ಸರಮಾಲೆ ಹೆಣೆದು ಕಥೆ ಕಟ್ಟಿದ್ದ ಮುಸುಕುಧಾರಿ ಚಿನ್ನಯ್ಯನನ್ನು ವಿಶೇಷ ತನಿಖಾ ತಂಡ (SIT) ಬಂಧಿಸಿದೆ. ಸತತ ವಿಚಾರಣೆಯ ಬಳಿಕ ಚಿನ್ನಯ್ಯನನ್ನು ತನಿಖಾ ತಂಡ ಬಂಧಿಸಿದೆ.

ಅನಾಮಿಕ ತೋರಿಸಿದ 17 ಪಾಯಿಂಟ್‌ಗಳಲ್ಲಿ ಏನೂ ಸಿಗದಿದ್ದ ಹಿನ್ನೆಲೆ ಎಸ್‌ಐಟಿ ತಂಡ ಸಮಾಧಿ ಶೋಧವನ್ನು ಸ್ಥಗಿತಗೊಳಿಸಿ ಮಾಸ್ಕ್ ಮ್ಯಾನ್ (Mask Man) ವಿರುದ್ಧವೇ ರಿವರ್ಸ್ ತನಿಖೆ ಶುರು ಮಾಡಿತ್ತು. ಪ್ರಕರಣದ ತನಿಖಾಧಿಕಾರಿ ಜಿತೇಂದ್ರ ದಯಾಮ ಮತ್ತು ಸುಮಾರು 25 ಪೊಲೀಸರ ತಂಡ ಎಸ್‌ಐಟಿ ಠಾಣೆಯಲ್ಲಿ ತೀವ್ರ ವಿಚಾರಣೆ ನಡೆಸಿದ್ದರು. ವಿವಿಧ ಆಯಾಮಗಳಲ್ಲಿ ಅನಾಮಿಕನ ಮುಂದೆ ಪ್ರಶ್ನೆಗಳನ್ನ ಇಟ್ಟಿದ್ದರು. ಬಂಧಿತನನ್ನು ಇಂದು ನ್ಯಾಯಾಲಯದಲ್ಲಿ ಹಾಜರಿಪಡಿಸಲಿದ್ದು ಮರಳಿ ವಶಕ್ಕೆ ಪಡೆಯುವ ಸಾಧ್ಯತೆಯಿದೆ.

Post a Comment

0 Comments