ಪೆರ್ಮುದೆ : ಬಿ.ಪಿ.ಪಿ.ಎ.ಎಲ್.ಪಿ. ಶಾಲೆಯಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯು ಬಹಳ ವಿಜೃಂಭಣೆ ಯಿಂದ ಜರಗಿತು.ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸದಾಶಿವ.ಕೆ.ಕೆ ನೆರವೇರಿಸಿದರು.ವಾರ್ಡು ಸದಸ್ಯೆ ಇರ್ಷಾನ ಇಸ್ಮಾಯಿಲ್ ಕಾರ್ಯಕ್ರಮವನ್ನು ಉದ್ಘಾಟಿಸಿ ಸ್ವಾತಂತ್ರ್ಯ ದಿನಾಚರಣೆಯ ಮಹತ್ವ ತಿಳಿಸಿದರು, ,ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಅಶೋಕ.ಕೆ ಮಾತೃ ಸಂಘದ ಅಧ್ಯಕ್ಷೆ ಸುನಿತ,ಪ್ರೀ ಪ್ರೈಮರಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆ ತೇಜಸ್ವಿನಿ, ಪಿ.ಟಿ.ಎ ಉಪಾಧ್ಯಕ್ಷೆ ಚೇತನ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಸದಾಶಿವ.ಕೆ.ಕೆ ಸ್ವಾತಂತ್ರ್ಯ ದಿನಾಚರಣೆಯ ಸಂದೇಶವನ್ನು ತಿಳಿಸಿದರು.ಮಕ್ಕಳಿಂದ ವಿವಿಧ ಡ್ರಿಲ್, ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿತು.ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಶಾಲೆಯಲ್ಲಿ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಅತಿಥಿಗಳು ಬಹುಮಾನಗಳನ್ನು ವಿತರಿಸಿದರು.ಊರ ಸಂಘ ಸಂಸ್ಥೆಗಳು, ರಕ್ಷಕರು, ಅಧ್ಯಾಪಕ ವೃಂದ ಸಹಕರಿಸಿದರು. ಶಾಲಾ ಅಧ್ಯಾಪಿಕೆ ಸ್ವಾತಿ ಸ್ವಾಗತಿಸಿದರು.ಅಧ್ಯಾಪಿಕೆ ಡೆಫ್ನಿ ಸ್ಮಿತಾ ಡಯಾಸ್ ಕಾರ್ಯಕ್ರಮವನ್ನು ನಿರೂಪಿಸಿದರು. ಅಧ್ಯಾಪಕರಾದ ಜಯಪ್ರಸಾದ್ ವಂದಿಸಿದರು.
0 Comments