ಉಪ್ಪಳ : ಸಹಕಾರ ಭಾರತಿ ಮಂಜೇಶ್ವರ ತಾಲೂಕು ಸಮಿತಿಯ ವಾರ್ಷಿಕ ಸಮ್ಮೇಳನ ಬಾಯಾರು ಬ್ಯಾಂಕ್ ಸಭಾಂಗಣದಲ್ಲಿ ಜರಗಿತು.
ಕೇರಳ ಸರಕಾರದ ಕೃಷಿ ಇಲಾಖೆಯ ನಿವೃತ್ತ ಉಪನಿರ್ದೇಶಕರಾದ ತಿರುಮಲೇಶ್ವರ ಭಟ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಸಹಕಾರ ಭಾರತಿಯ ಪ್ರಾಂತ್ಯ ಅಧ್ಯಕ್ಷ ಅಡ್ವೋಕೇಟ್ ಕರುಣಾಕರನ್ ನಂಬ್ಯಾರ್ ಹಾಗೂ ಪ್ರಾಂತ್ಯ ಸಮಿತಿ ಸದಸ್ಯರಾದ ಐತ್ತಪ್ಪ ಮವ್ವಾರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ತಾಲೂಕು ಅಧ್ಯಕ್ಷ ಶಂಕರ ನಾರಾಯಣ ಭಟ್ ಖಂಡಿಗೆ ಅಧ್ಯಕ್ಷತೆ ವಹಿಸಿದ್ದ ಸಭೆಯಲ್ಲಿ ಬಾಯಾರು ಬ್ಯಾಂಕ್ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ಕೂವೆತ್ತೋಡಿ, ಜಿಲ್ಲಾ ಸಂಘಟನಾ ಪ್ರಮುಖ್ ಅಶೋಕ್ ಬಾಡೂರು ಮುಂತಾದವರು ಮಾತನಾಡಿದರು. ತಾಲೂಕು ಕಾರ್ಯದರ್ಶಿ ಕೃಷ್ಣ ಮೂರ್ತಿ ನೂಜಿ ಸ್ವಾಗತಿಸಿ ಬಾಯಾರು ಸೇವಾ ಸಹಕಾರಿ ಬ್ಯಾಂಕಿನ ಕಾರ್ಯದರ್ಶಿ ವಿಶ್ವೇಶ್ವರ ಭಟ್ ವಂದಿಸಿದರು.
0 Comments