Ticker

6/recent/ticker-posts

Ad Code

ಬದಿಯಡ್ಕ ಶ್ರೀಭಾರತೀ ವಿದ್ಯಾಪೀಠ ಶಾಲೆಯಲ್ಲಿ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ‎


 ‎ದೀಪಾವಳಿಯ ಬೆಳಕಿನಂತೆ ಬೆಳಗಿದ  ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮ

ಬದಿಯಡ್ಕ ಶ್ರೀಭಾರತೀ ವಿದ್ಯಪೀಠ ಶಾಲೆಯಲ್ಲಿ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ‎

‎ಬದಿಯಡ್ಕ : ಅ.23 ದೀಪಾವಳಿಯ ಶುಭ ಸಂದರ್ಭದಲ್ಲಿ ಶ್ರೀ ಭಾರತೀ ವಿದ್ಯಾಪೀಠ ಬದಿಯಡ್ಕ ಶಾಲೆಯಲ್ಲಿ  ಭಟ್ ಬಯೋ ಟೆಕ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಬೆಂಗಳೂರು ಸಂಸ್ಥೆಯ ಡಾ.ಶಾಮ ಭಟ್ ಇವರ ವತಿಯಿಂದ ಶಿಷ್ಯವೇತನ ವಿತರಣಾ ಕಾರ್ಯಕ್ರಮ ನಡೆಯಿತು.

‎ಕಳೆದ ಮೂರು ವರ್ಷಗಳಿಂದ ಡಾ.ಶಾಮ ಭಟ್ ಇವರು ತಮ್ಮ ಸ್ನೇಹಿತ  ಆಶುಕವಿ ವಾಗ್ಮಿ ದಿ.ಪೊಟ್ಟಿಪ್ಪಲ ನಾರಾಯಣ ಭಟ್ಟರ ಸ್ಮರಣಾರ್ಥ ಶಾಲೆಯಿಂದ ಗುರುತಿಸಲ್ಪಟ್ಟ ಇಬ್ಬರು ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡುವ ಕಾರ್ಯವನ್ನು ನಿರಂತರವಾಗಿ ಮುಂದುವರಿಸುತ್ತಿದ್ದು, ಈ ಬಾರಿ ಸಹ ಆ ಪರಂಪರೆ ಮುಂದುವರಿಯಿತು.

‎ಈ ವರ್ಷದ ಶಿಷ್ಯವೇತನವನ್ನು ಪಡೆದವರು - ಅಕ್ಷಯಾ ವೆಂಕಟೇಶ್ (10ನೇ ತರಗತಿ) ಮತ್ತು ಜಯಂತ ಕೃಷ್ ಭಟ್ ಕೆ (8ನೇ ತರಗತಿ).

‎ಶಿಷ್ಯವೇತನ ನೀಡಿ ಮಾತನಾಡಿದ ಡಾ. ಶಾಮ ಭಟ್ ತಾನು ಬೆಳೆದು ಬಂದ ದಾರಿ, ಸ್ನೇಹಿತನೊಂದಿಗಿನ ಒಡನಾಟದ ಗಾಢತೆ ಮುಂತಾದವುಗಳ ಬಗ್ಗೆ ಹೇಳುತ್ತಾ ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕೆ ಶುಭ ಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯರು ಮಾತನಾಡಿ 

‎“ಡಾ. ಶಾಮ ಭಟ್  ನೀಡುತ್ತಿರುವ ಶಿಷ್ಯವೇತನವು ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳ ಜೀವನದಲ್ಲಿ ಹೊಸ ಬೆಳಕನ್ನು ಹರಿಸುತ್ತಿದೆ ಜೊತೆಗೆ ಮಿತ್ರತ್ವದ ಸಾರವನ್ನೂ ತಿಳಿಸುತ್ತಿದೆ ,” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

‎ಶಾಲಾಡಳಿತ ಮಂಡಳಿಯ ಅಧ್ಯಕ್ಷರಾದ ಕೆರೆಮೂಲೆ ಸುಬ್ರಹ್ಮಣ್ಯ ಭಟ್ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ " ವಿದ್ಯಾರ್ಥಿ ವೇತನ ಸಿಕ್ಕಿರುವುದು ಇಬ್ಬರಿಗಾದರೂ ಎಲ್ಲಾ ಮಕ್ಕಳಿಗೂ ಇದೊಂದು ಜೀವನ ಪಾಠ" ಎಂದು ಹೇಳಿದರು. ಪೊಟ್ಟಿಪ್ಪಲ ನಾರಾಯಣ ಭಟ್ ಅವರ ಪುತ್ರ ಡಾ. ಗಿರೀಶ್, ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷರಾದ ಡಾ. ವಾಣಿಶ್ರೀ ಕಾಸರಗೋಡು, ಶಾಲಾಡಳಿತ ಮಂಡಳಿಯ ಕಾರ್ಯದರ್ಶಿ ಮಧುಸೂದನ ತಿಮ್ಮಕಜೆ, ಸದಸ್ಯ ಡಾ.ಬೇ. ಸೀ. ಗೋಪಾಲಕೃಷ್ಣ ಭಟ್, ಉಪಸ್ಥಿತರಿದ್ದರು. 

‎ವಿದ್ಯಾರ್ಥಿ ವೇತನ ಪಡೆದ ವಿದ್ಯಾರ್ಥಿಗಳಿಬ್ಬರೂ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡು ಈ ವಿದ್ಯಾರ್ಥಿ ವೇತನವನ್ನು ಕಲಿಕೆಗೆ ಪೂರಕವಾಗುವಂತ‌ಹ ಕಾರ್ಯಗಳಿಗೆ ವಿನಿಯೋಗಿಸುತ್ತೇವೆ ಎಂದು ಹೇಳಿದರು. 

‎ಶಾಲಾ ಅಧ್ಯಾಪಿಕೆ ಸರೋಜಾ ಕಾನತ್ತಿಲ ಕಾರ್ಯಕ್ರಮದ  ನಿರ್ವಹಣೆ  ಮಾಡಿದರು.

Post a Comment

0 Comments