Ticker

6/recent/ticker-posts

Ad Code

ಬಿಜೆಪಿ ಅಭ್ಯರ್ಥಿಗಳ ಎರಡನೇ ಯಾದಿ ಬಿಡುಗಡೆ

 

ಕಾಞಂಗಾಡ್:  ತ್ರಿಕರಿಪುರ ಸಂಘಟನಾ ಮಂಡಲದ ಪಂಚಾಯತು ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗೊಳಿಸಲಾಯಿತು. ಈ ಸಂಬಂಧ ನಡೆದ ಕಾರ್ಯಕರ್ತರ ಸಮಾವೇಶವನ್ನು ಪಕ್ಷದ ಜಿಲ್ಲಾ ಅಧ್ಯಕ್ಷೆ ಎಂ.ಎಲ್.ಅಶ್ವಿನಿ ಉದ್ಘಾಟಿಸಿದರು. ಮಂಡಲ ಅಧ್ಯಕ್ಷ ಟಿ.ವಿ.ಶಿಬಿನ್ ಅಧ್ಯಕ್ಷತೆ ವಹಿಸಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಆರ್.ಸುನಿಲ್, ಬಿಡಿಜೆಎಸ್ ಜಿಲ್ಲಾ ಕಾರ್ಯದರ್ಶಿ ಕೆ.ಕುಂಞಿಕೃಷ್ಣನ್, ಇತರ ಬಿಜೆಪಿ ನೇತಾರರಾದ ಟಿ.ಕುಂಞಿರಾಮನ್, ಕೆ.ಶಶಿಧರನ್ ಮೊದಲಾದವರು ಉಪಸ್ಥಿತರಿದ್ದರು.

Post a Comment

0 Comments