ಉಡುಪಿ: ಮಂದಾರ್ತಿ ಮೇಳದ ಬಣ್ಣದ ವೇಷಧಾರಿ ಈಶ್ವರ ಗೌಡ ನೆಮ್ಮಾರ್ (48) ಬುಧವಾರ ತಡರಾತ್ರಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಮಹಿಷಾಸುರ ಪಾತ್ರ ನಿರ್ವಹಿಸಿದ ಬಳಿಕ ಚೌಕಿಯಲ್ಲಿಯೇ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ಕುಂದಾಪುರದ ಸೌಡ ಸಮೀಪ ಆಟ ನಡೆಯುತ್ತಿತ್ತು. 2ನೇ ಮೇಳದ ಪ್ರತಿಭಾನ್ವಿತ ಕಲಾವಿದ ಶೃಂಗೇರಿ ಸಮೀಪದ ನೆಮ್ಮಾರ್ ನಿವಾಸಿಯಾಗಿದ್ದಾರೆ. ದೇವಿ ಮಾಹಾತ್ಯೆ ಪ್ರಸಂಗದಲ್ಲಿ ಮಹಿಷಾಸುರ ಪಾತ್ರ ಕೊನೆಯಾಗುತ್ತಿದ್ದಂತೆ ಸಂಪೂರ್ಣ ವೇಷ ಕಳಚುವ ಮುನ್ನವೇ ಹೃದಯಾಘಾತದಿಂದ ಕುಸಿದಿದ್ದಾರೆ. ಸಹಕಲಾವಿದರು ಆಸ್ಪತ್ರೆಗೆ ಸಾಗಿಸುವ ಮುನ್ನವೇ ಇಹಲೋಕ ತ್ಯಜಿಸಿದ್ದರು. ಈಶ್ವರ ಗೌಡ ಅವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

0 Comments