ಮಂಗಳೂರು : ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿಯು ಕಲ್ಕೂರ ಪ್ರತಿಷ್ಠಾನ (ರಿ) ಸಹಯೋಗದಲ್ಲಿ ಹಮ್ಮಿಕೊಂಡ ಕನ್ನಡ ರಾಜ್ಯೋತ್ಸವ
ತುಳುನಾಡಿನ ಆಚಾರ ವಿಚಾರದ ವಿದ್ವಾಂಸ, ಧಾರ್ಮಿಕ,ಸಾಂಸ್ಕೃತಿಕ,ಸಾಮಾಜಿಕ ಮುಂದಾಳು,ಪ್ರಖರ ವಾಗ್ಮಿ,ಬದಿಯಡ್ಕ ತುಳುವೆರೆ ಆಯನೋ ಕೂಟದ ಅಧ್ಯಕ್ಷ, ಉಪ್ಲೇರಿ ಶ್ರೀಮಂತ್ರಮೂರ್ತಿ ಗುಳಿಗ ಸನ್ನಿಧಿಯ ಪ್ರಧಾನಕರ್ಮಿ ಗೋಪಾಲಕೃಷ್ಣ ಕುಲಾಲ್ ವಾಂತಿಚ್ಚಾಲು ಅವರಿಗೆ ಕಲ್ಕೂರ ರಾಜ್ಯೋತ್ಸವ ಪುರಸ್ಕಾರ ಪ್ರದಾನಿಸಲಾಯಿತು.
ಮಂಗಳೂರು ಡಾನ್ಬಾಸ್ಕೋ ಹಾಲ್ ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಚಿತ್ರಾಪುರ ಮಠಾಧೀಶರು, ಅಖಿಲ ಭಾರತ ತುಳು ಒಕ್ಕೂಟದ ಮಾಜಿ ಅಧ್ಯಕ್ಷ ಎ.ಸಿ.ಭಂಡಾರಿ, ಶಾರದ ವಿದ್ಯಾ ಸಂಸ್ಥೆಗಳ ಮುಖ್ಯಸ್ಥ ಎಂ.ಬಿ.ಪುರಾಣಿಕ್,ಕ.ಸಾ.ಪ.ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಸುರೇಶ್ ಶೆಟ್ಟಿ ಯಯ್ಯಾಡಿ, ಪ್ರದೀಪ್ ಕುಮಾರ್ ಕಲ್ಕೂರ ಮೊದಲಾದವರು ಉಪಸ್ಥಿತರಿದ್ದರು.


0 Comments