ಕಾಸರಗೋಡು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾಸರಗೋಡು, ಹಾಗೂ ಭಜನಾ ಪರಿಷತ್ ಕಾಸರಗೋಡು ತಾಲೂಕು ವತಿಯಿಂದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾl ವೀರೇಂದ್ರ ಹೆಗ್ಗಡೆ ಅವರ 78ನೇ ವರುಷದ ಹುಟ್ಟು ಹಬ್ಬದ ಪ್ರಯುಕ್ತವಾಗಿ ದೇವಸ್ಥಾನದಲ್ಲಿ ಭಜನಾ ಸಂಕೀರ್ತನೆ, ರುಧ್ರಾಭಿಷೇಕ, ವಿಶೇಷ ಕಾರ್ತಿಕ ಪೂಜೆ ಹಾಗೂ ಹೆಗ್ಗಡೆಯವರ ಶ್ರೇಯೋಭಿವೃದ್ಧಿಗೆ ಪ್ರಾರ್ಥನೆ ಗೈಯ್ಯಲಾಯಿತು. ಕಾರ್ಯಕ್ರಮದಲ್ಲಿ ತಾಲೂಕು ಭಜನಾ ಪರಿಷತ್ತಿನ ಅಧ್ಯಕ್ಷರಾದ ಡಾl ಕೆ.ಎನ್. ವೆಂಕಟ್ರಮಣ ಹೊಳ್ಳ, ಜಿಲ್ಲಾ ಪ್ರಬಂಧಕರಾದ ಜನಾರ್ಧನ, ಕಚೇರಿ ಪ್ರಬಂಧಕ ಶ್ರೇಯಸ್, ಕಾಸರಗೋಡು ವಲಯದ ಮೇಲ್ವಿಚಾರಕರಾದ ಗೋಪಾಲಕೃಷ್ಣ ಕೂಡ್ಲು, ನವ ಜೀವನ ಸಮಿತಿಯ ಸದಸ್ಯ ನಾರಾಯಣ, ಹರಿಜಾಲ್ ಶ್ರೀ ಮಹಾವಿಷ್ಣು ಭಜನಾ ಮಂಡಳಿಯ ಸದಸ್ಯರಾದ ಜಯಲಕ್ಷ್ಮಿ ಹಾಗೂ ಕಚೇರಿ ಸಿಬ್ಬಂದಿಗಳು ಭಾಗಿಯಾದರು.

0 Comments