Ticker

6/recent/ticker-posts

Ad Code

ಬಾಳೆಹಣ್ಣು ಗಂಟಲಲ್ಲಿ ಸಿಲುಕಿ 5 ವರ್ಷದ ಮಗು ಮೃತ್ಯು


 ಬಾಳೆಹಣ್ಣು ಗಂಟಲಲ್ಲಿ ಸಿಲುಕಿ 5 ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ತಮಿಳುನಾಡಿನ ಈರೋಡ್‌ನಲ್ಲಿ ನಡೆದಿದೆ.ಈರೋಡ್‌ನ ಅನ್ನೈ ಸತ್ಯ ನಗರದ ಎಂ. ಸಾಯಿಶರಣ್‌(5) ಮೃತ ಬಾಲಕ. ಬಾಲಕ ಮನೆಯಲ್ಲಿ ಬಾಳೆಹಣ್ಣು ತಿನ್ನುವಾಗ ಅದು ಗಂಟಲಲ್ಲಿ ಸಿಕ್ಕಿಹಾಕಿಕೊಂಡು, ಉಸಿರಾಟದ ತೊಂದರೆ ಕಾಣಿಸಿಕೊಂಡಿತು. ತಕ್ಷಣ ಆತನ ಪೋಷಕರಾದ ಮಾಣಿಕ್ ಮತ್ತು ಮಹಾಲಕ್ಷ್ಮಿ ನೆರೆಹೊರೆಯವರ ಸಹಾಯದಿಂದ ಆ ಮಗುವನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು. ಆಸ್ಪತ್ರೆಯಲ್ಲಿ ಮಗುವನ್ನು ಪರೀಕ್ಷಿಸಿದ ವೈದ್ಯರು, ಶ್ವಾಸನಾಳದಲ್ಲಿ ಬಾಳೆಹಣ್ಣಿನ ತುಂಡು ಸಿಲುಕಿಕೊಂಡಿರುವುದಾಗಿ ತಿಳಿಸಿದ್ದಾರೆ. ನಂತರ ವೈದ್ಯರು ಆ ಮಗುವನ್ನು ಚಿಕಿತ್ಸೆಗಾಗಿ ಈರೋಡ್‌ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದರು. ಆದರೆ, ಅಲ್ಲಿ ಮಗುವನ್ನು ಪರೀಕ್ಷಿಸಿದ ವೈದ್ಯರು ಮಗು ಉಸಿರಾಡಲಾಗದೆ ಮೃತಪಟ್ಟಿದೆ ಎಂದು ಘೋಷಿಸಿದ್ದಾರೆ. ನಂತರ ಬಾಳೆಹಣ್ಣಿನ ತುಂಡನ್ನು ಮಗುವಿನ ಶ್ವಾಸನಾಳದಿಂದ ತೆಗೆದು ಹಾಕಲಾಯಿತು. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Post a Comment

0 Comments