ಸಂಗ್ರಹಿತ ಚಿತ್ರ
ಕಾಞಂಗಾಡ್: ಮಡಿಕೈ ಸಮೀಪ ಕಾರಕೋಡ್ ಎಂಬಲ್ಲಿ ಚಿರತೆ ಕಾಣಿಸಿಕೊಂಡಿದೆ. ಬೆಳಿಗ್ಗೆ ಕಾನಂ ಎಂಬಲ್ಲಿನ ರಬ್ಬರ್ ತೋಟದಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸಗಾರರು ತೋಟದ ಬಳಿ ಚಿರತೆ ಓಡಿ ಹೋಗುತ್ತಿರುವುದನ್ನು ನೋಡಿದ್ದರು ಎನ್ನಲಾಗುತ್ತಿದ್ದು ಈ ಪ್ರದೇಶದಲ್ಲಿ ಭೀತಿಯನ್ನು ಸೃಷ್ಟಿಸಿದೆ. ಎರಡು ದಿನಗಳ ಹಿಂದೆ, ಎಚಿಕ್ಕಾನಂ ಎಂಬಲ್ಲಿಯೂ ಚಿರತೆ ಕಾಣಿಸಿಕೊಂಡಿತ್ತು. ಈ ಪ್ರದೇಶದಲ್ಲಿ ಚಿರತೆಯು ಅಲೆದಾಡುತ್ತಿದೆ ಎಂದು ಸ್ಥಳೀಯರು ಹೇಳುತ್ತಾರೆ. ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

0 Comments