ಕಾಸರಗೋಡು : ಜಿಲ್ಲೆಯಲ್ಲಿ ಕ್ರೈಸ್ತ ಬಾಂಧವರು ಕ್ರಿಸ್ ಮಸ್ ಹಬ್ಬವನ್ನು ಸಂಭ್ರಮ, ಸಡಗರದಿಂದ ಆಚರಿಸಿದರು. ಕಯ್ಯಾರ್ ಕ್ರಿಸ್ತ ರಾಜ ದೇವಾಲಯದದಲ್ಲಿ ನಡೆದ ಬಲಿಪೂಜೆಯನ್ನು ರಾಂಚಿ ಸೆಮಿನರಿಯ ನಿರ್ದೇಶಕ ಫಾದರ್ ಜೋನ್ ಕ್ರಾಸ್ತ ನೆರವೇರಿಸಿದರು. ಕಯ್ಯಾ ರ್ ಕ್ರಿಸ್ತರಾಜ ದೇವಾಲಯದ ಧರ್ಮಗುರು ಫಾದರ್ ವಿಶಾಲ್ ಮೋನಿಸ್ ಉಪಸ್ಥಿತರಿದ್ದರು. ಬಳಿಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು.
ಕಾಸರಗೋಡು ಜಿಲ್ಲೆಯ ಎಲ್ಲಾ ಚರ್ಚ್ ಗಳಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಕ್ರಿಸ್ಮಸ್ ನ್ನು ಸಂಭ್ರಮದಿಂದ ಆಚರಿಸಲಾಯಿತು. ದಿವ್ಯ ಬಲಿಪೂಜೆಯಲ್ಲಿ ಅಪಾರ ಭಕ್ತರು ಪಾಲ್ಗೊಂಡಿದ್ದರು. ಗೋದಲಿ, ನಕ್ಷತ್ರ ಸೇರಿದಂತೆ ದೀಪಾಲಂಕಾರಗಳಿಂದ ಚರ್ಚ್ ಗಳು ಗಮನ ಸೆಳೆಯುತ್ತಿದ್ದವು . ಕ್ರಿಸ್ಮಸ್ ಗೀತೆಗಳನ್ನು ಹಾಡಿ ಯೇಸು ಕ್ರಿಸ್ತ ರ ಜನನವನ್ನು ಸ್ಮರಿಸಿ ನಮಿಸಲಾಯಿತು.

0 Comments