ವಿಟ್ಲ: ಶಂಕಿತ ಬಾಂಗ್ಲಾ ಪ್ರಜೆಗೆ ಪಾಸ್ ಪೋರ್ಟ್ ಮಾಡಿಕೊಡಲು ಸಹಾಯ ಮಾಡಿದ ಆರೋಪದ ಮೇಲೆ ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿಯೋರ್ವರನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ವಿಟ್ಲ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಪ್ರದೀಪ್ ಬಂಧಿತ ಆರೋಪಿ. ಶಂಕಿತ ಬಾಂಗ್ಲಾ ಪ್ರಜೆ ಶಕ್ತಿದಾಸ್ ಎಂಬಾತನಿಗೆ ಪಾಸ್ ಪೋರ್ಟ್ ಪಡೆಯಲು ಸಹಕರಿಸಿದ ಆರೋಪ ಇವರ ಮೇಲಿದೆ. ಅದೇ ಠಾಣೆಯ ಕಾನ್ಸ್ಟೇಬಲ್ ಸಾಬೀ ಮಿರ್ಜಿ ನೀಡಿದ ದೂರಿನ ಆದಾರದ ಮೇಲೆ ಪ್ರದೀಪ್ ರನ್ನು ಬಂಧಿಸಲಾಗಿದೆ. ಈ ಹಿಂದೆ ಶಕ್ತಿದಾಸ್ ಪಾಸ್ ಪೋರ್ಟ್ ಅರ್ಜಿಯನ್ನು ಸಾಬೀ ಮಿರ್ಜಿ ತಿರಸ್ಕರಿಸಿದ್ದರು. ಆದರೆ ಇತ್ತೀಚೆಗೆ ಸಾಬೀ ಮಿರ್ಜಿ ಕರ್ತವ್ಯ ನಿಮಿತ್ತ ಬೇರೆ ಕಡೆಗೆ ಹೋದಾಗ ಕಾನ್ಸ್ಟೇಬಲ್ ಪ್ರದೀಪ್ ಸಹಾಯ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದೀಗ ಆರೋಪಿ ಕಾನ್ಸ್ಟೇಬಲ್ ಪ್ರದೀಪ್ ರನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

0 Comments