ವಿಟ್ಲ : ಪರವಾನಗಿ ಇಲ್ಲದೆ ಕಾನೂನು ಬಾಹಿರವಾಗಿ ಅಕ್ರಮವಾಗಿ ಲಾರಿಯಲ್ಲಿ ಕೆಂಪುಕಲ್ಲು ಸಾಗಾಟ ನಡೆಸುತ್ತಿರುವುದನ್ನು ಪತ್ತೆ ಹಚ್ಚಿ ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಬಂಟ್ವಾಳ, ಕೊಳ್ಳಾಡು ಗ್ರಾಮದ ಕೂಡ್ತಮುಗೇರು ಎಂಬಲ್ಲಿ, ವಿಟ್ಲ ಪೊಲೀಸ್ ಠಾಣೆಯ ರತ್ನಕುಮಾರ್ ಪೊಲೀಸ್ ಉಪ ನಿರೀಕ್ಷಕರು, ಸಿಬ್ಬಂದಿಗಳೊಂದಿಗೆ ವಾಹನ ತಪಾಸಣೆ ಮಾಡುವ ವೇಳೆ, ಬೋಳದೆ ಕಡೆಯಿಂದ ಕೂಡ್ತಮುಗೇರು ಕಡೆಗೆ ಬರುತ್ತಿದ್ದ KA-12-A-9095 ನಂಬ್ರದ ಲಾರಿಯನ್ನು ನಿಲ್ಲಿಸಿ ತಪಾಸಣೆ ನಡೆಸಿದಾಗ, ಲಾರಿಯಲ್ಲಿ ಕೆಂಪು ಕಲ್ಲು ತುಂಬಿಸಿಕೊಂಡು ಸಾಗಿಸುತ್ತಿರುವುದು ಕಂಡುಬಂದಿದೆ. ತಕ್ಷಣ ಕಲ್ಲುಗಳ ಸಾಗಾಟದ ಬಗ್ಗೆ ಲಾರಿ ಚಾಲಕ ಎನ್.ಸಿ.ಶರೀಪ್ (42) ಎಂಬಾತನಲ್ಲಿ ವಿಚಾರಿಸಿದಾಗ, ಯಾವುದೇ ಪರವಾನಿಗೆ ಇಲ್ಲದೆ, ಅಕ್ರಮವಾಗಿ ಕೆಂಪು ಕಲ್ಲುಗಳನ್ನು ತುಂಬಿಸಿಕೊಂಡು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಲಾರಿ ಚಾಲಕನನ್ನು ಹಾಗೂ ಲಾರಿಯನ್ನು ಲೋಡ್ ಸಮೇತ ವಶಕ್ಕೆ ಪಡೆದು ವಿಟ್ಲ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

0 Comments