ಕಾಸರಗೋಡು: ವಿದ್ಯಾನಗರದಲ್ಲಿರುವ ಜಿಲ್ಲಾ ನ್ಯಾಯಾಲಯ ಕಟ್ಟಡಕ್ಕೆ ಬಾಂಬು ಇರಿಸಿರುವುದಾಗಿ ಇಮೇಲ್ ಸಂದೇಶ ಕಳುಹಿಸಲಾಗಿದೆ. ಬೆದರಿಕೆಯ ಮಾಹಿತಿ ಪಡೆದ ಪೊಲೀಸರು ಮತ್ತು ಬಾಂಬ್ ಶ್ವಾನದಳ ಸ್ಥಳಕ್ಕೆ ಆಗಮಿಸಿ ಕ್ಷಿಪ್ರ ತನಿಖೆ ಆರಂಭಿಸಿದೆ. ಗುರುವಾರ ಮಧ್ಯಾಹ್ನ 1 ರಿಂದ 2 ಗಂಟೆಯೊಳಗೆ ಬಾಂಬ್ ಸ್ಫೋಟ ಸಂಭವಿಸಲಿದೆ ಎಂದು ಬೆದರಿಕೆಯಲ್ಲಿ ತಿಳಿಸಲಾಗಿದೆ. ಘಟನೆಯ ನಂತರ ನ್ಯಾಯಾಲಯದ ನೌಕರರನ್ನು ನ್ಯಾಯಾಲಯದ ಕಟ್ಟಡದಿಂದ ಹೊರಗಡೆ ಕಳುಹಿಸಲಾಗಿದ್ದು, ಪರಿಶೀಲನೆ ಪ್ರಗತಿಯಲ್ಲಿದೆ. ನ್ಯಾಯಾಲಯದ ಕಟ್ಟಡದ ಪ್ರಮುಖ ಸ್ಥಳಗಳಲ್ಲಿ ಬಾಂಬ್ಗಳನ್ನು ಇರಿಸಲಾಗಿದೆ ಎಂದು ಬೆದರಿಕೆ ಸಂದೇಶದಲ್ಲಿ ಹೇಳಲಾಗಿದೆ.

0 Comments