Ticker

6/recent/ticker-posts

Ad Code

ಲೈಂಗಿಕ ಪೀಡನೆ ಆರೋಪಿಯಾಗಿರುವ ಎಣ್ಮಕಜೆ ಪಂ.ಸದಸ್ಯನ ರಾಜಿನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ ಪಂಜಿನ ಮೆರವಣಿಗೆ


 ಪೆರ್ಲ : ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಎಣ್ಮಕಜೆ ಗ್ರಾಮ ಪಂಚಾಯತ್ ಸದಸ್ಯ ಸಿಪಿಐಎಂ ನೇತಾರ ಸುಧಾಕರ ಮಾಸ್ತರ್ ಕೂಡಲೇ ತನ್ನ ಪಂಚಾಯತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ  ಬಾಳೆಮೂಲೆ ಬಿಜೆಪಿ ವಾರ್ಡ್ ಸಮಿತಿಯ ವತಿಯಿಂದ ದೊಂದಿ ಮೆರವಣಿಗೆ ನಡೆಯಿತು. ಬಾಳೆಮೂಲೆ ಟಿವಿ ಶೆಡ್ ಬಳಿಯಿಂದ ಬಾಳೆಮೂಲೆ ಶಾಲೆಯವರೆಗೆ ಪ್ರತಿಭಟನೆ ಮೆರವಣಿಗೆ ನಡೆಯಿತು.  ತನ್ನ ಸದಸ್ಯತನಕ್ಕೆ ರಾಜಿನಾಮೆ ನೀಡದಿದ್ದಲ್ಲಿ ಮುಂದಕ್ಕೆ ಸುಧಾಕರ್ ಮಾಸ್ತರರ ಪಂಚಾಯತ್ ಪ್ರವೇಶಕ್ಕೆ ತಡೆ ಮಾಡಿ ಕಪ್ಪು ಬಾವುಟ ಪ್ರದರ್ಶನ ಮಾಡಿ ಉಗ್ರ ಪ್ರತಿರೋಧಕ್ಕೆ ಬಿಜೆಪಿ ಸನ್ನದ್ಧವಾಗಿದೆ ಎಂಬ ಎಚ್ಚರಿಕೆಯನ್ನು ನೀಡಲಾಯಿತು.ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಮುರಳೀಧರ್ ಯಾದವ್,ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಕೆಪಿ ಅನಿಲ್ ಕುಮಾರ್,ಬಿಜೆಪಿ ಮಂಡಲ ಜತೆಕಾರ್ಯದರ್ಶಿ ಸುಮಿತ್ ರಾಜ್,ಬಿಜೆಪಿ ಪಂಚಾಯತ್ ಅಧ್ಯಕ್ಷ ರಮಾನಂದ ಭಟ್ ಎಡಮಲೆ,ಪ್ರಧಾನ ಕಾರ್ಯದರ್ಶಿ ರಾಧಾಕೃಷ್ಣ ಭಟ್ ಪತ್ತಡ್ಕ,ಹಿಂದೂ ಸಂಘಟನೆಯ ಮುಖಂಡರಾದ ಅಕ್ಷಯ್ ರಜಪೂತ್ ಕಲ್ಲಡ್ಕ,ವಾರ್ಡ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

Post a Comment

0 Comments