ತಿರುವನಂತಪುರ : ಸಂಸದ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಬದಲಿಗೆ ಪಕ್ಷದ ಬೇಡಿಕೆಯಂತೆ ಪ್ರಚಾರದ ಕಣಕ್ಕಿಳಿಯುತ್ತೇನೆ ಎಂದು ಹೇಳಿದ್ದಾರೆ. 'ಈ ಬಾರಿ ಸ್ಪರ್ಧಿಸುವ ಉದ್ದೇಶ ನನಗಿಲ್ಲ. ನಾನು ತಿರುವನಂತಪುರ ಜಿಲ್ಲೆಯಲ್ಲಿ ಮಾತ್ರವಲ್ಲ, ಇಡೀ ರಾಜ್ಯದಲ್ಲಿಯೂ ಪ್ರಚಾರ ಮಾಡುತ್ತೇನೆ. ಕಳೆದ ಬಾರಿ ನಾನು 56 ಅಭ್ಯರ್ಥಿಗಳ ಪರ ಪ್ರಚಾರ ಮಾಡಿದ್ದೆ. ಈ ಬಾರಿ ಇನ್ನೂ ಹೆಚ್ಚಿನ ಕ್ಷೇತ್ರಗಳಲ್ಲಿ ಪ್ರಚಾರ ಮಾಡುತ್ತೇನೆ' ಎಂದು ತರೂರ್ ಸ್ಪಷ್ಟಪಡಿಸಿದ್ದಾರೆ. ಈ ಹಿಂದೆ, ಕೇರಳದಲ್ಲಿ ಕಾಂಗ್ರೆಸ್ನ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಈ ಬಾರಿ ತರೂರ್ ಕೂಡ ಇರುತ್ತಾರೆ ಎಂಬುದು ಸ್ಪಷ್ಟ.

0 Comments