Ticker

6/recent/ticker-posts

Ad Code

ಪ್ರಿಯತಮೆಯೊಡನೆ ಮಾತನಾಡಿದ ಬಳಿಕ ನೇಣು ಬಿಗಿದು ಯುವಕನ ನಿಗೂಢ ಆತ್ಮಹತ್ಯೆ

 

ಉಡುಪಿ : ಪ್ರಿಯತಮೆಯೊಡನೆ ಮಾತನಾಡಿ ರೂಮ್ ಒಳಗೆ ಹೋದ ಯುವಕನೋರ್ವ ಕೆಲವೇ ಹೊತ್ತಿನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ನಿಗೂಢ ಘಟನೆ ಉಡುಪಿ ಸಮೀಪದ ಕುಂಜಿಬೆಟ್ಟುವಿನಲ್ಲಿ ನಡೆದಿದೆ. ಕುಂಜಿಬೆಟ್ಟು ನಿವಾಸಿ ರಾಜು ಎಂಬವರ ಪುತ್ರ ರಂಜಿತ್ (28) ಆತ್ಮಹತ್ಯೆಗೆ ಶರಣಾದ ಯುವಕ. ಜ.29ರಂದು ರಂಜಿತ್‌ ಅವರು ಪೈಂಟಿಂಗ್ ಕೆಲಸ ಮುಗಿಸಿ ಮನೆಗೆ ಬಂದು ಮನೆಯವರೊಟ್ಟಿಗೆ ಮಾತನಾಡಿದ್ದರು. ಅನಂತರ ತಾನು ಪ್ರೀತಿಸುತ್ತಿದ್ದ ಹುಡುಗಿ ಪ್ರೀತಿ ಎಂಬವರ ಜತೆ ಫೋನಿನಲ್ಲಿ ಮಾತನಾಡುತ್ತಾ ಅವರ ರೂಮಿನೊಳಗೆ ಹೋಗಿದ್ದಾರೆ. ರಾತ್ರಿ ವೇಳೆ ಮನೆಯ ವಾಟರ್ ಟ್ಯಾಂಕಿನ ನೀರು ತುಂಬಿ ಕೆಳಗೆ ಬೀಳುತ್ತಿದ್ದುದರಿಂದ ಅವರ ತಂದೆ ವಾಟರ್ ಟ್ಯಾಂಕಿನ ವಾಲ್ ನ್ನು ಆಫ್ ಮಾಡಲು ಹೋಗುವಾಗ ರಂಜಿತ್ ಅವರ ರೂಮಿನ ಕಿಟಕಿ ತೆರೆದು ನೋಡಿದ್ದಾರೆ. ಈ ವೇಳೆ ಆತ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾನೆ. ಕೂಡಲೇ ಆತನನ್ನು ಕೆಳಗೆ ಇಳಿಸಿ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಈ ಸಾವಿನಲ್ಲಿ ಸಂಶಯವಿರುವುದಾಗಿ ಆತನ ಅಣ್ಣ ರಕ್ಷಿತ್ ಅವರು ನೀಡಿರುವ ದೂರಿನಂತೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Post a Comment

0 Comments