Ticker

6/recent/ticker-posts

Ad Code

ಅವೈಜ್ಞಾನಿಕ ರಸ್ತೆ ಕಾಮಗಾರಿ : ಪ್ರತ್ಯೇಕ ಪ್ರಕರಣಗಳಲ್ಲಿ ಎರಡು ವರ್ಷದ ಹಸುಳೆ ಸಹಿತ ಮೂವರು ಸಾವು

 

ಬೆಂಗಳೂರು: ರಾಜ್ಯದಲ್ಲಿ ರಸ್ತೆ ದುರಸ್ತಿ ವಿಳಂಬ, ಅವೈಜ್ಞಾನಿಕ ಹಂಪ್, ಗುಂಡಿಯಿಂದಾಗಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಮಹದೇವಪುರದಲ್ಲಿ ರಸ್ತೆ ದುರಸ್ತಿ ಕಾಮಗಾರಿ ವಿಳಂಬದಿಂದ ಎರಡು ವರ್ಷದ ಕಂದಮ್ಮನ  ಬಲಿಯಾಗಿದೆ. ಹಿಂದಿನಿಂದ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದ ಮಗು ತ್ರಿಶೂಲ್ ತಲೆ ಮೇಲೆ ಕಾರು ಹರಿದ ಪರಿಣಾಮ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಇದರಿಂದ ರೊಚ್ಚಿಗೆದ್ದ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಮತ್ತೆ ಇಂತಹ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು. ಅರ್ಧಂಬರ್ಧ ಕಾಮಗಾರಿಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.

ಇನ್ನೊಂದೆಡೆ  ಆಡುಗೋಡಿಯ ಬಾಷ್ ಕಂಪನಿಯ ರಸ್ತೆಯಲ್ಲಿ ರಸ್ತೆಗುಂಡಿಗೆ ಮಹಿಳೆ ಬಲಿಯಾಗಿದ್ದಾರೆ. 49 ವರ್ಷದ ಅಮಲ ಮೃತ ಮಹಿಳೆ. ಗುಂಡಿಯಿಂದಾಗಿ ಆಯ ತಪ್ಪಿ ಕೆಳಗೆ ಬಿದ್ದ ಅಮಲಾ ಮೇಲೆ ಹಿಂದಿನಿಂದ ಬಂದ ಟಿಪ್ಪರ್ ಹರಿದು ಅವಘಡ ಸಂಭವಿಸಿದೆ. 

ಅದೇ ರೀತಿಯಲ್ಲಿ  ಶಿವಮೊಗ್ಗದಲ್ಲಿ ಪಾಲಿಕೆ ನಿರ್ಮಿಸಿದ್ದ ಅವೈಜ್ಞಾನಿಕ ಹಂಪ್ ನಿಂದ ಯುವಕನೋರ್ವ ಸಾವನ್ನಪ್ಪಿದ್ದಾನೆ. ಹಂಪ್ ಕಾಣದೇ ಬೈಕ್ ನಿಂದ ಬಿದ್ದಿರುವ  ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಎಲ್ಬಿಎಸ್ ನಗರದ ಫ್ಲೈ ಓವರ್‌ನಲ್ಲಿ ಎರಡು ದಿನಗಳ ಹಿಂದೆ ಅವಘಡ ಸಂಭಿಸಿದ್ದು, ಹಂಪ್ ಕಾಣದೆ ಬೈಕ್‌ನಲ್ಲಿ ಬಿದ್ದಿದ್ದ 35 ವರ್ಷದ ಉಲ್ಲಾ ಎಂಬ ಯುವಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ.

Post a Comment

0 Comments