ತಿರುವನಂತಪುರ: ಕೇರಳವನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಬಹುನಿರೀಕ್ಷಿತ ಪ್ರಸ್ತಾವನೆಯನ್ನು ಕೇಂದ್ರ ಸಚಿವ ಸಂಪುಟ ಪರಿಗಣಿಸಿದೆ. ರಾಜ್ಯದ ಸಾಂವಿಧಾನಿಕ ಹೆಸರನ್ನು ಅದರ ಸಾಂಪ್ರದಾಯಿಕ ಮಲಯಾಳಂ ಉಚ್ಚಾರಣೆ ಮತ್ತು ಸಾಂಸ್ಕೃತಿಕ ಗುರುತಿಗೆ ಅನುಗುಣವಾಗಿ ಬದಲಾಯಿಸಲು ಮುಂದಾಗಿದೆ.
ಈ ಪ್ರಸ್ತಾವನೆ ಕಾರ್ಯರೂಪಕ್ಕೆ ಬಂದರೆ, ಈ ವರ್ಷದ ಏಪ್ರಿಲ್-ಮೇ ತಿಂಗಳಲ್ಲಿ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಕೇಂದ್ರವು ಒಂದು ಮಹತ್ವದ ಹೆಜ್ಜೆಯನ್ನು ಇಟ್ಟಂತಾಗಿದೆ. ಸರ್ಕಾರಿ ದಾಖಲೆಗಳಲ್ಲಿ ರಾಜ್ಯದ ಅಧಿಕೃತ ಹೆಸರನ್ನು ಕೇರಳಂ ಎಂದು ಬದಲಾಯಿಸುವಂತೆ ಕೋರಿ ಕೇರಳ ವಿಧಾನಸಭೆಯು ಈಗಾಗಲೇ ನಿರ್ಣಯವನ್ನು ಅಂಗೀಕರಿಸಿದೆ.
140 ವಿಧಾನಸಭಾ ಸದಸ್ಯರನ್ನು ಆಯ್ಕೆ ಮಾಡಲು ಮೇ ತಿಂಗಳ ಮೊದಲು ರಾಜ್ಯದಲ್ಲಿ ಚುನಾವಣೆ ನಿಗದಿಯಾಗಿದೆ, ಆದರೂ ಭಾರತದ ಚುನಾವಣಾ ಆಯೋಗವು ಇನ್ನೂ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿಲ್ಲ. 2024ರಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸಂವಿಧಾನದ ಎಂಟನೇ ಪರಿಚ್ಛೇದದಲ್ಲಿ ಪಟ್ಟಿ ಮಾಡಲಾದ ಎಲ್ಲಾ ಭಾಷೆಗಳಲ್ಲೂ "ಕೇರಳ" ರಾಜ್ಯವನ್ನು “ಕೇರಳಂ” ಎಂದು ಮರುನಾಮಕರಣ ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಮಂಡಿಸಿದ್ದರು.

0 Comments