ಕಾಸರಗೋಡು : ಕಾಸರಗೋಡು ವಿಧಾನಸಭಾ ಕ್ಷೇತ್ರದಲ್ಲಿ ಎನ್ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ಅವರು ಇಂದು ನಾಮಪತ್ರ ಸಲ್ಲಿಸಿದರು. ಅಶ್ವಿನಿ ಅವರು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ತಾಳಿಪಡ್ಪಿನಿಂದ ರೋಡ್ ಶೋ ಮೂಲಕ ಬಂದು ಆರ್ಡಿಒಗೆ ನಾಮಪತ್ರ ಸಲ್ಲಿಸಿದರು.
ಬೈಂದೂರು ಶಾಸಕ ಗುರುರಾಜ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಪನ್ವೇಲು ಶಾಸಕ ಪ್ರಶಾಂತ್ ಠಾಕೂರ್, ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಬಳೆ, ಬಿಜೆಪಿ ಪ್ರಾದೇಶಿಕ ಅಧ್ಯಕ್ಷ ಕೆ. ಶ್ರೀಕಾಂತ್ ಮತ್ತು ರಾಜ್ಯ ಸಮಿತಿ ಸದಸ್ಯ ರವೀಶ ತಂತ್ರಿ ಕುಂಟಾರು ಮೊದಲಾದವರು ಉಪಸ್ಥಿತರಿದ್ದರು.


0 Comments