ಪೆರ್ಲ : ಎಣ್ಮಕಜೆ ಪಂಚಾಯತಿನ ಬೆದ್ರಂಪಳ್ಳ ಸಮೀಪದ ನಡುಬೈಲು ಪ್ರದೇಶದಲ್ಲಿ ಹುಚ್ಚುನಾಯಿ ಕಾಟ ವ್ಯಾಪಕಗೊಂಡಿದ್ದು ರವಿವಾರ ಇಬ್ಬರಿಗೆ ಕಚ್ಚಿರುವುದಾಗಿ ದೂರಲಾಗಿದೆ. ಇಲ್ಲಿನ ಪುಟಾಣಿಗೆ ನಾಯಿ ಕಚ್ಚಿದ್ದು ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಇದೇ ಪ್ರದೇಶದಲ್ಲಿ ಕೂಲಿ ಕಾರ್ಮಿಕರೋರ್ವರು ನಾಯಿಯ ಕಡಿತಕ್ಕೊಳಗಾಗಿರುವುದಾಗಿ ದೂರಲಾಗಿದೆ. ಈ ಬಗ್ಗೆ ಸ್ಥಳೀಯ ಆರೋಗ್ಯ ಇಲಾಖೆಗೆ ಮಾಹಿತಿ ನೀಡಲಾಗಿದ್ದು ಹಲವು ಪ್ರದೇಶಗಳಲ್ಲಿ ತಿರುಗಾಡುತ್ತಿರುವ ಬೀದಿ ನಾಯಿಗಳು ಭೀತಿ ಸೃಷ್ಟಿಸುತ್ತಿರುವುದಾಗಿ ಸ್ಥಳೀಯರು ದೂರಿದ್ದಾರೆ.

0 Comments