ಪೆರ್ಲ : ಅತೀ ಪುರಾತನ ಹಾಗೂ ಇತಿಹಾಸ ಪ್ರಸಿದ್ಧ ನೆಲ್ಲಿಕುಂಜೆಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ನವೀಕರಣ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ರವಿವಾರ ಉಜ್ವಲ ಚಾಲನೆ ನೀಡಲಾಗಿದೆ. ಬೆಳಗ್ಗೆ ಕ್ಷೇತ್ರದಲ್ಲಿ ಉಗ್ರಾಣ ಮುಹೂರ್ತ ನಡೆದು ಬಳಿಕ ಪೆರ್ಲ ಸತ್ಯನಾರಾಯಣ ಮಂದಿರದಿಂದ ಹಸಿರುವಾಣಿ ಹೊರೆ ಕಾಣಿಕೆ ವೈಭವೋಪೇತವಾಗಿ ಸಾಗಿ ಬಂದಿತ್ತು.
ಸಂಜೆ ದೇಲಂಪಾಡಿಯ ಗಣೇಶ ತಂತ್ರಿಗಳವರಿಗೆ ಪೂರ್ಣಕುಂಭ ಸ್ವಾಗತ, ಬಳಿಕ ವಿವಿಧ ತಾಂತ್ರಿಕ ವೈದಿಕ ಕಾರ್ಯಕ್ರಮಗಳು ಜರಗಿದವು. ಉದ್ಯಮಿ ದಾನಿ ಗೋಪಾಲಕೃಷ್ಣ ಪೈ ಬದಿಯಡ್ಕ ದೀಪ ಪ್ರಜ್ವಲನೆಯೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ವೈಷ್ಣವಿ ನಾಟ್ಯಾಲಯ ಪುತ್ತೂರು ಇವರಿಂದ ನೃತ್ಯಾರ್ಪಣಂ ಕಾರ್ಯಕ್ರಮ ಜನ ಮನ ರಂಜಿಸಿತು.
ಸೋಮವಾರ (ಇಂದು) ಬೆಳಗ್ಗೆ ಗಣಪತಿ ಹವನ, ಪ್ರೋಕ್ತಹೋಮ, ಪ್ರಾಯಶ್ಚಿತ ಹೋಮ, ಬಿಂಬ ಶುದ್ಧಿ, ಅಂಕುರ ಪೂಜೆ ನಡೆಯಿತು. ಬೆಳಗ್ಗಿನಿಂದ ಮಧ್ಯಾಹ್ನವರೆಗೆ ಶ್ರೀ ಶಾರದ ಭಜನಾ ಸಂಘ ಕಜಂಪಾಡಿ, ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಸಂಘ ಉಕ್ಕಿನಡ್ಕ, ಮಹಾವಿಷ್ಣು ಭಜನಾ ಸಂಘ ಕೆಡೆಂಜಿ, ಪರಂಜ್ಯೋತಿ ಭಜನಾ ಸಂಘ ಬೆದ್ರಂಪಳ್ಳ ಅವರಿಂದ ಭಜನಾ ಸಂಕೀರ್ತನೆ, ಮಧ್ಯಾಹ್ನ ಮಹಾಪೂಜೆ ಜರಗಿತು.







.jpeg)
0 Comments