ಮಾಣಿಲ : ದೈವಾಧೀನರಾದ ನಾಟ್ಯಗುರು ವಿದ್ವಾನ್ ಶ್ರಾವಣ್ ಉಳ್ಳಾಲ್ ಇವರಿಗೆ ಕುಕ್ಕಾಜೆಯಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು.
ಮಂತ್ರ, ನಾಟ್ಯ, ಕಲಾ ಗುರುಕುಲ (ರಿ) ಉಳ್ಳಾಲ ಇದರ ಕುಕ್ಕಾಜೆ ಶಾಖೆಯ ವಿದ್ಯಾರ್ಥಿಗಳು ಶ್ರದ್ಧಾಂಜಲಿ ಸಲ್ಲಿಸಿ ಗುರುಗಳ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದರು. ಮತ್ತು ಗುರುಗಳ ಆತ್ಮಕ್ಕೆ ಸದ್ಗತಿ ಪ್ರಾಪ್ತಿಯಾಗಲಿ ಎಂಬ ಪ್ರಾರ್ಥನೆಯೊಂದಿಗೆ ಶ್ರೀದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಕ್ಷೇತ್ರದ ಶ್ರೀಕೃಷ್ಣ ಗುರೂಜಿ ಉಪಸ್ಥಿತರಿದ್ದರು.

0 Comments