ಕಾಸರಗೋಡು : ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ಧರ್ಮಪತ್ನಿ ಹೇಮಾವತಿ ಅಮ್ಮನವರ ಜನ್ಮದಿನವಾದ ಇಂದು ಕಾಸರಗೋಡಿನ 72 ಬಡಕುಟುಂಬಗಳ ಮನೆಗೆ ತೆರಳಿ ಹಣ್ಣು ಹಂಪಲು ನೀಡಿ ಜನ್ಮದಿನವನ್ನು ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ಧಿ ಕಾಸರಗೋಡು ಯೋಜನಾಧಿಕಾರಿ ದಿನೇಶ್, ದರ್ಮಸ್ಥಳ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಕಾಸರಗೋಡು ಮಂಡಲ ಅಧ್ಯಕ್ಷ ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ ವಲಯ ಮೇಲ್ವಿಚಾರಕರಾದ ಗೋಪಾಲಕೃಷ್ಣ ಸೇವಾ ಪ್ರತಿನಿಧಿ ಜ್ಯೋತಿ, ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಸೌಮ್ಯ ಜತೆಗಿದ್ದರು.

0 Comments