ಹುಬ್ಬಳ್ಳಿ : ವಿಳಾಸ ಕೇಳುವ ನೆಪದಲ್ಲಿ ಬಾಲಕನೋರ್ವನಿಗೆ ಇಂಜೆಕ್ಷನ್ ಹಾಕಿದ ಮುಸುಕುಧಾರಿಗಳು ಎಸ್ಕೇಪ್ ಆಗಿರುವ ಘಟನೆ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ತರ್ಲಘಟ್ಟ ಗ್ರಾಮದಲ್ಲಿ ನಡೆದಿದೆ. ಮಣಿಕಂಠ ಗಾಣಿಗೇರ (10) ಎಂಬ ಬಾಲಕನಿಗೆ ಇಂಜೆಕ್ಷನ್ ಚುಚ್ಚಲಾಗಿದೆ. ರಸ್ತೆಯಲ್ಲಿ ಹೋಗುತ್ತಿದ್ದ ಮಣಿಕಂಠನನ್ನು ತಡೆದು ವಿಳಾಸ ಕೇಳುವ ನೆಪದಲ್ಲಿ ನಿಲ್ಲಿಸಿದ್ದಾರೆ. ಈ ವೇಳೆ ಗಟ್ಟಿಯಾಗಿ ಬಾಯಿ ಹಿಡಿದು ಇಂಜೆಕ್ಷನ್ ಚುಚ್ಚಿ ಎಸ್ಕೇಪ್ ಆಗಿದ್ದಾರೆ. ಕೂಡಲೇ ಬಾಲಕನನ್ನು ಪೋಷಕರು ಕುಂದಗೋಳ ತಾಲೂಕು ಆಸ್ಪತ್ರೆಯಲ್ಲಿ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಹೆಚ್ಚುವರಿ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಬಾಲಕನಿಗೆ ಯಾವ ಇಂಜೆಕ್ಷನ್ ಹಾಕಿದ್ದಾರೆ ಎಂದು ಪೋಷಕರಲ್ಲಿ ಆತಂಕ ಉಂಟಾಗಿದ್ದು ಮಕ್ಕಳ ಅಪಹರಣಕಾರರ ಕೃತ್ಯ ಇದೆಂದು ಸಂಶಯಿಸಲಾಗಿದೆ.

0 Comments