ಮುಂಬೈ : ಮೂರುವರೆ ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿ ಹತ್ಯೆಗೈದ ಪ್ರಕರಣದಲ್ಲಿ 65 ವರ್ಷದ ವ್ಯಕ್ತಿಗೆ ಪುಣೆಯ ವಿಶೇಷ ನ್ಯಾಯಾಲಯ ಮರಣದಂಡನೆ ವಿಧಿಸಿದೆ.
ಶಿಕ್ಷೆಗೆ ಗುರಿಯಾದ ವ್ಯಕ್ತಿಯನ್ನು ಭೀಮರಾವ್ ಕಾಂಬ್ಳೆ (65) ಎಂದು ಗುರುತಿಸಲಾಗಿದೆ. ಮಹಾರಾಷ್ಟ್ರದ ನಸ್ರಾಪುರ ಗ್ರಾಮದಲ್ಲಿ ನಡೆದ ಈ ಅಮಾನವೀಯ ಕೃತ್ಯ ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ಎಸ್.ಆರ್. ಸಲುಂಖೆ ನೇತೃತ್ವದ ನ್ಯಾಯಪೀಠ, ಈ ಪ್ರಕರಣವನ್ನು "ಅಪರೂಪದಲ್ಲಿ ಅಪರೂಪದ ಪ್ರಕರಣ" ಎಂದು ಪರಿಗಣಿಸಿ ಗಲ್ಲು ಶಿಕ್ಷೆ ವಿಧಿಸಿದೆ. ತೀರ್ಪಿನಲ್ಲಿ ಅಪರಾಧದ ಕ್ರೌರ್ಯ, ಮಗುವಿನ ಮೇಲಿನ ದೌರ್ಜನ್ಯ ಹಾಗೂ ಸಮಾಜದ ಮೇಲೆ ಬೀರಿದ ಪರಿಣಾಮಗಳನ್ನು ಉಲ್ಲೇಖಿಸಲಾಗಿದೆ.
ಅಪರಾಧದ ಗಂಭೀರತೆ ಮತ್ತು ಉದ್ದೇಶವನ್ನು ಗಮನಿಸಿದ ನ್ಯಾಯಾಲಯ, ಮರಣದಂಡನೆಯೇ ಸೂಕ್ತ ಶಿಕ್ಷೆ ಎಂದು ಅಭಿಪ್ರಾಯಪಟ್ಟಿದೆ.
ಮೇ 1ರಂದು ನಡೆದಿದ್ದ ಈ ಕೃತ್ಯದ ಬಳಿಕ ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿತ್ತು. ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ಜೂನ್ 25ರಂದು ಆರೋಪಿಯನ್ನು ತಪ್ಪಿತಸ್ಥ ಎಂದು ಘೋಷಿಸಲಾಗಿತ್ತು. ಬಳಿಕ ಅಂತಿಮ ತೀರ್ಪು ಪ್ರಕಟಿಸಿದ ನ್ಯಾಯಾಲಯ, ಭೀಮರಾವ್ ಕಾಂಬ್ಳೆಗೆ ಮರಣದಂಡನೆ ವಿಧಿಸಿದೆ.

0 Comments