ಮುಳ್ಳೇರಿಯ : ಮನೆಯಿಂದ ಹೊರಗೆ ಹೋಗಿದ್ದ ಯುವಕ ನಾಪತ್ತೆಯಾದ ಘಟನೆಯೊಂದು ವರದಿಯಾಗಿದೆ. ಬೆಳ್ಳೂರಿನ ನೆಟ್ಟಣಿಗೆ ಬಸ್ತಿಯ ವಿನಯ ಕುಮಾರ್ (40) ನಾಪತ್ತೆಯಾಗಿರುವ ವ್ಯಕ್ತಿ. ಈ ತಿಂಗಳ 7 ರಂದು ಬೆಳಿಗ್ಗೆ 9:30 ರ ಸುಮಾರಿಗೆ ಮನೆಯಿಂದ ಹೊರಟಿದ್ದು, ಹಿಂತಿರುಗದ ಕಾರಣ, ಸಂಬಂಧಿಕರ ಮನೆಗಳಲ್ಲಿ ಮತ್ತು ಇತರ ಸ್ಥಳಗಳಲ್ಲಿ ಹುಡುಕಾಡಿದರೂ ಯಾವುದೇ ಮಾಹಿತಿ ಸಿಗಲಿಲ್ಲ. ಅವರ ತಾಯಿ ಮಾಲತಿ ಆದೂರು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

0 Comments