ಕಾಸರಗೋಡು : ಎಲೆಕ್ಟ್ರಾನಿಕ್ ಮತಯಂತ್ರ (ಇವಿಎಂ) ಹ್ಯಾಕಿಂಗ್ ಕುರಿತು ಹೊರಬಂದಿರುವ ಆರೋಪಗಳು ನಿಜವಾಗಿದ್ದರೆ, ಅದು ಅತ್ಯಂತ ಗಂಭೀರ ಅಪರಾಧ ಹಾಗೂ ಚುನಾವಣಾ ಅಕ್ರಮದ ಪ್ರಯತ್ನವಾಗಿದ್ದು, ಸಮಗ್ರ ತನಿಖೆ ನಡೆಸಬೇಕು ಎಂದು ಸಂಸದ ರಾಜ್ಮೋಹನ್ ಉಣ್ಣಿತ್ತಾನ್ ಆಗ್ರಹಿಸಿದ್ದಾರೆ. ಈ ಕುರಿತು ತಾವು ಕೇಂದ್ರ ಗೃಹ ಸಚಿವರಿಗೆ ಅಧಿಕೃತ ದೂರು ಸಲ್ಲಿಸುವುದಾಗಿ ತಿಳಿಸಿದ ಅವರು, ಇದು ಪಕ್ಷದ ಆಂತರಿಕ ಚರ್ಚೆಯಲ್ಲಿ ಮುಗಿಯುವ ವಿಷಯವಲ್ಲ ಎಂದು ಹೇಳಿದ್ದಾರೆ.
"ಯಾರೇ ಆಗಿರಲಿ, ತಪ್ಪಿತಸ್ಥರೆಂದು ಸಾಬೀತಾದರೆ ಕಾನೂನಿನ ಪ್ರಕಾರ ಶಿಕ್ಷೆಯಾಗಬೇಕು. ಈ ವಿಷಯವನ್ನು ಮಾಧ್ಯಮಗಳಿಗೆ ತಿಳಿಸಿರುವವರು ಪೊಲೀಸ್ ಅಥವಾ ಸಂಬಂಧಿತ ಅಧಿಕಾರಿಗಳಿಗೂ ದೂರು ನೀಡಬೇಕು" ಎಂದು ಅವರು ಒತ್ತಾಯಿಸಿದ್ದಾರೆ.
ಕಾಸರಗೋಡು ಕಾಂಗ್ರೆಸ್ ಮುಖಂಡ ಬಿ.ಎಂ. ಜಮಾಲ್ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರಿಗೆ ದೂರು ಸಲ್ಲಿಕೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಮೋಹನ್ ಉಣ್ಣಿತ್ತಾನ್ ಈ ಪ್ರತಿಕ್ರಿಯೆ ನೀಡಿದ್ದಾರೆ. ದೂರಿನ ಪ್ರಕಾರ, ಇವಿಎಂ ಹ್ಯಾಕಿಂಗ್ಗೆ ಬಿಜೆಪಿ ಸಂಚು ರೂಪಿಸುತ್ತಿದೆ, ಅದನ್ನು ತಡೆಯುವ ತಂತ್ರಜ್ಞಾನ ತನ್ನ ಬಳಿ ಇದೆ ಎಂದು ಹೇಳಿ ಬಿ.ಎಂ. ಜಮಾಲ್ ಹಣ ವಸೂಲಿ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಉದುಮ ಮತ್ತು ಕಾಸರಗೋಡು ವಿಧಾನಸಭಾ ಕ್ಷೇತ್ರಗಳಿಂದಲೂ ಇದೇ ರೀತಿಯಲ್ಲಿ ಹಣ ಪಡೆದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಪ್ರಕರಣದಲ್ಲಿ ಬಿ.ಎಂ. ಜಮಾಲ್ ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳುವಂತೆ ಯುಡಿಎಫ್ ಕಾಸರಗೋಡು ಜಿಲ್ಲಾ ಸಮಿತಿ, ಯುಡಿಎಫ್ ರಾಜ್ಯ ಸಮಿತಿ ಹಾಗೂ ಕೆಪಿಸಿಸಿ ಅಧ್ಯಕ್ಷರಿಗೆ ದೂರು ಸಲ್ಲಿಸಿದೆ.
ಹೆಚ್ಚಿನ ಅಪ್ಡೇಟ್ಗಳಿಗಾಗಿ ವೀಕ್ಷಿಸಿ – ವಿಶೇಷ ಚಾನೆಲ್
https://www.instagram.com/visheshachannel/
https://www.facebook.com/profile.php?id=61572771802334
https://www.linkedin.com/in/visheshachannel/
www.youtube.com/@VisheshaChannelofficial
#news #viral #blogger #viralnews #dailypost

0 Comments