Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ದೇವಾಲಯದೊಳಗೆ ಧೋತಿಯ ಜಾಹೀರಾತಿಗಾಗಿ ರೀಲ್ಸ್ ಚಿತ್ರೀಕರಣ; ದೇವಸ್ವಂ ಅಧಿಕಾರಿಗಳಿಂದ ಪೊಲೀಸರಿಗೆ ದೂರು


 ಆಳಪ್ಪುಳ :  ದೇವಾಲಯದೊಳಗೆ ದೊತಿಯ ಜಾಹೀರಾತಿಗಾಗಿ ರೀಲ್ಸ್ ಚಿತ್ರೀಕರಿಸಿದ ಘಟನೆಗೆ ಸಂಬಂಧಿಸಿ ದೇವಸ್ವಂ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಘಟನೆ ಚೆಂಗನ್ನೂರು ಮಹಾದೇವ ದೇವಸ್ಥಾನದಲ್ಲಿ ನಡೆದಿದೆ. ದೇವಾಲಯದ ಆಡಳಿತದ ಅನುಮತಿ ಪಡೆಯದೇ ರೀಲ್ಸ್ ಚಿತ್ರೀಕರಿಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಸಂಬಂಧ ಚೆಂಗನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿದೆ. ದೇವಾಲಯ ಮುಚ್ಚಿದ್ದ ವೇಳೆಯಲ್ಲಿ ಅನಧಿಕೃತವಾಗಿ ದೇವಾಲಯದ ಆವರಣಕ್ಕೆ ಪ್ರವೇಶಿಸಿ ಚಿತ್ರೀಕರಣ ನಡೆಸಲಾಗಿದೆ ಎಂದು ದೇವಸ್ವಂ ಅಧಿಕಾರಿಗಳು ತಿಳಿಸಿದ್ದಾರೆ. ಚೆಂಗನ್ನೂರು ದೇವಸ್ವಂ ಸಬ್ ಗ್ರೂಪ್ ಅಧಿಕಾರಿ ಅಖಿಲ್ ಕುಮಾರ್ ಅವರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ದೂರಿನಲ್ಲಿ, ಅನುಮತಿಯಿಲ್ಲದೆ ದೇವಾಲಯದ ಆವರಣಕ್ಕೆ ಅತಿಕ್ರಮ ಪ್ರವೇಶ ಮಾಡಿರುವುದರ ಜೊತೆಗೆ ದೇವಾಲಯದ ಸಾಂಪ್ರದಾಯಿಕ ಆಚರಣೆಗಳು ಹಾಗೂ ಪಾವಿತ್ರ್ಯಕ್ಕೆ ಧಕ್ಕೆ ಉಂಟುಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದಾರೆ.

Post a Comment

0 Comments

ಜಾಹೀರಾತು

Responsive Advertisement