Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಅಯೋಧ್ಯೆ ಯಾತ್ರೆಯಿಂದ ಮರಳುವ ವೇಳೆ ಕಾಸರಗೋಡು ಮೂಲದ ವ್ಯಕ್ತಿ ನಾಪತ್ತೆ

ಬದಿಯಡ್ಕ, : ಅಯೋಧ್ಯೆಯ ರಾಮಮಂದಿರ ದರ್ಶನ ಮುಗಿಸಿ ವಾಪಸಾಗುತ್ತಿದ್ದ ವೇಳೆ ಕಾಸರಗೋಡು ಜಿಲ್ಲೆಯ ಬದಿಯಡ್ಕ ಸಮೀಪದ ಪೆರಡಾಲದ ಪಂಜಿತ್ತಡ್ಕ ನಿವಾಸಿ ರಾಜೇಶ್ (49) ಮಧ್ಯಪ್ರದೇಶದಲ್ಲಿ ನಾಪತ್ತೆಯಾಗಿರುವ ಘಟನೆ ನಡೆದಿದೆ.

ರಾಜೇಶ್ ಅವರು ಈ ತಿಂಗಳ 16ರಂದು ತಮ್ಮ ತಾಯಿಯೊಂದಿಗೆ ಅಯೋಧ್ಯೆಗೆ ಪ್ರಯಾಣ ಬೆಳೆಸಿದ್ದರು. ದೇವರ ದರ್ಶನ ಮುಗಿಸಿ ಜುಲೈ 21ರಂದು ಊರಿಗೆ ಮರಳುವ ಪ್ರಯಾಣ ಆರಂಭಿಸಿದ್ದರು. ಜುಲೈ 22ರಂದು ಮಧ್ಯಪ್ರದೇಶದ ಇಟಾರ್ಸಿ (Itarsi) ರೈಲು ನಿಲ್ದಾಣದಲ್ಲಿ ರೈಲಿನಿಂದ ಇಳಿದಿದ್ದರು.

ಈ ವೇಳೆ ತಾಯಿಯನ್ನು ನಿಲ್ದಾಣದಲ್ಲೇ ಬಿಟ್ಟು   ಮತ್ತೊಂದು ರೈಲಿಗೆ ಹತ್ತಿದ ರಾಜೇಶ್ ಬಳಿಕ ನಾಪತ್ತೆಯಾಗಿದ್ದಾರೆ. ನಂತರ ಸಂಬಂಧಿಕರಿಗೆ ಮಾಹಿತಿ ನೀಡಲಾಗಿದ್ದು, ಅವರ ತಾಯಿಯನ್ನು ಸುರಕ್ಷಿತವಾಗಿ ಊರಿಗೆ ಕರೆತರಲಾಯಿತು.

ರಾಜೇಶ್ ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದು, ಇದುವರೆಗೆ ಯಾವುದೇ ಸುಳಿವು ಲಭ್ಯವಾಗಿಲ್ಲ.

ಈ ಕುರಿತು ರಾಜೇಶ್ ಅವರ ಸಹೋದರ ಅನಿಲ್ ಅವರು ಮಧ್ಯಪ್ರದೇಶ ಪೊಲೀಸ್ ಹಾಗೂ ಬದಿಯಡ್ಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ರಾಜೇಶ್ ಅವರ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಈ ಸಂಖ್ಯೆಗಳಿಗೆ ಸಂಪರ್ಕಿಸಲು ಮನವಿ ಮಾಡಲಾಗಿದೆ:

📞 04998 284033

📞 8848543989


ಹೆಚ್ಚಿನ ಅಪ್‌ಡೇಟ್‌ಗಳಿಗಾಗಿ ವೀಕ್ಷಿಸಿ – ವಿಶೇಷ ಚಾನೆಲ್


https://www.instagram.com/visheshachannel/

https://www.facebook.com/profile.php?id=61572771802334

https://x.com/VisheshaC4541

https://www.linkedin.com/in/visheshachannel/

www.youtube.com/@VisheshaChannelofficial




#news #viral #blogger #viralnews #dailypost

Post a Comment

0 Comments

ಜಾಹೀರಾತು

Responsive Advertisement